Mysore
24
broken clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ

ವಿರಾಜಪೇಟೆ: ಅಮ್ಮತ್ತಿ ಕಾರ್ವಾಡು ಗ್ರಾಮದ ಶ್ರೀ ಚಾಮುಂಡೇಶ್ವರಿ ಹಾಗೂ ಶ್ರೀ ಪಾಷಣಮೂರ್ತಿ ಕ್ಷೇತ್ರದಲ್ಲಿ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಪಂಜುರ್ಲಿ ದೈವದ ಪ್ರತಿಷ್ಠಾಪನಾ ಕಾರ್ಯವು ವಿಜೃಂಭಣೆಯಿಂದ ನಡೆಯಿತು.

ಅಮ್ಮತ್ತಿಯ ಗುರುರಾಜ್ ಭಟ್ ನೇತೃತ್ವದಲ್ಲಿ ದೇವಾಲಯದಲ್ಲಿ ಗಣಪತಿ ಪೂಜೆ, ಕಳಸ ಪೂಜೆ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿದವು. ನಂತರ ಅನ್ನಸಂತರ್ಪಣೆ ನಡೆಯಿತು.

ಕ್ಷೇತ್ರದ ಪ್ರಮುಖರಾದ ಕುಟ್ಟಂಡ ಸರಸ್ವತಿ ಹಾಗೂ ಲೋಕೇಶ್ ಮುತ್ತಪ್ಪ, ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!