Mysore
21
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಮಾರ್ಚ್‌ 1ರಿಂದ ಸರ್ಕಾರಿ ನೌಕರರ ಅನಿರ್ದಿಷ್ಟ ಮುಷ್ಕರ

ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿಕೆ

ಚಾಮರಾಜನಗರ: ಒಪಿಎಸ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಾರ್ಚ್‌ 1  ರಿಂದ ಕರ್ತವ್ಯಕ್ಕೆ ಗೈರಾಗುವ ಮೂಲಕ ಅನಿರ್ದಿಷ್ಟ ಮುಷ್ಕರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2023-24ನೇ ಸಾಲಿನ ಬಜೆಟ್‌ನಲ್ಲಿ ಸರ್ಕಾರಿ ನೌಕರರ ವೇತನ, ಭತ್ಯೆ ಪರಿಷ್ಕರಣೆಗೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವುದು ಬೇಸರ ಮೂಡಿಸಿದೆ ಎಂದರು.
ಮುಷ್ಕರ ಸಂದರ್ಭದಲ್ಲಿ ನೌಕರರೆಲ್ಲರೂ ಮನೆಯಲ್ಲೇ ಇದ್ದುಕೊಂಡು ಡಿಪಿ ಹಾಗೂ ಸ್ಟೇಟಸ್‌ನಲ್ಲಿ ಬಿತ್ತಿಪತ್ರಗಳನ್ನು ಹಾಕುವ ಮೂಲಕ ಪ್ರತಿಭಟನೆ ನಡೆಸಲಾಗುವುದು. 6ನೇ ವೇತನ ಆಯೋಗದ ಮಾದರಿಯಂತೆ  7ನೇ ವೇತನ ಆಯೋಗದಿಂದ  ಶೀಘ್ರ ಮಧ್ಯಂತರ ವರದಿ ಪಡೆದು ವಿಧಾನಸಭಾ ಚುನಾವಣೆ ನೀತಿಸಂಹಿತೆ ಜಾರಿಗೂ ಮೊದಲು ಫಿಟ್‌ಮೆಂಟ್ ಸೌಲಭ್ಯ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಪಂಜಾಬ್, ರಾಜಾಸ್ತಾನ, ಹಿವಾಚಲಪ್ರದೇಶಗಳ ಮಾದರಿಯಲ್ಲಿ ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಪಿಂಚಣಿ ಸೌಲಭ್ಯ ಜಾರಿಗೊಳಿಸಬೇಕು. ಈ ಮೂಲಕ ನೌಕರರ ಸಂಧ್ಯಾಕಾಲದ ಬದುಕಿಗೆ ಆಸರೆಯಾಗಬೇಕೆಂದು ಮನವಿ ಮಾಡಿದರು.
ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವಸ್ವಾಮಿ, ಉಪಾಧ್ಯಕ್ಷ ಶಿವಮೂರ್ತಿ, ಯೋಗೇಶ್, ಖಜಾಂಚಿ ಮಹದೇವಯ್ಯ, ಕೃಷ್ಣಮೂರ್ತಿ, ರಾಜ್ಯ ಪರಿಷತ್ ಸದಸ್ಯ ಮಲ್ಲಿಕಾರ್ಜುನ ಕುಂಟೋಜಿ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!