Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಮಳವಳ್ಳಿ| ಎಲೆಕ್ಟ್ರಿಕಲ್‌ ಸ್ಕೂಟರ್ ಸ್ಫೋಟ: ೪ ಬೈಕ್ ಬೆಂಕಿಗಾಹುತಿ

ಮಳವಳ್ಳಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದ ಬಳಿ ನಿಲ್ಲಿಸಿದ್ದ ಎಲೆಕ್ಟ್ರಿಕಲ್‌ ಸ್ಕೂಟರ್ ಸ್ಫೋಟಗೊಂಡು ನಾಲ್ಕಕ್ಕೂ ಹೆಚ್ಚು ಬೈಕ್ ಬೆಂಕಿಗಾಹುತಿಯಾದ ಘಟನೆ ತಾಲ್ಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ.

ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ವಿವೇಕಾನಂದ ಪ್ರೌಢಶಾಲೆ ಶಿಕ್ಷಕ ಪ್ರಕಾಶ ಎಂಬವರಿಗೆ ಸೇರಿದ ಎಲೆಕ್ಟ್ರಿಕಲ್‌ ಸ್ಕೂಟರ್ ಸ್ಫೋಟಗೊಂಡಿದೆ.

ಮಳವಳ್ಳಿ ತಾಲ್ಲೂಕಿನ ಕಿರುಗಾವಲು ಗ್ರಾಮದ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರಕ್ಕೆ ಆಯೋಜನೆಗೊಂಡಿದ್ದ ಶಿಕ್ಷಕರು ಹೊರಗಡೆ ತಮ್ಮ ವಾಹನಗಳನ್ನು ನಿಲ್ಲಿಸಿ ಒಳಗೆ ಹೋಗಿದ್ದ ವೇಳೆ ಆಕಸ್ಮಿಕವಾಗಿ ಸ್ಫೋಟಗೊಂಡಿದ್ದು, ಈ ವೇಳೆ ಅಕ್ಕಪಕ್ಕ ನಿಲ್ಲಿಸಿದ್ದ ಮೂರು ಬೈಕ್ ಸಹ ಬೆಂಕಿಗಾಹುತಿಯಾಗಿವೆ.

ಸ್ಥಳಕ್ಕೆ ಅಗ್ನಿ ಶಾಮಕ ಠಾಣೆ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!