Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶರದ್‌ ಪವಾರ್‌

ನವದೆಹಲಿ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕ ಶರದ್ ಪವಾರ್ ಗುರುವಾರ ಸಂಜೆ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ.

ಈ ವೇಳೆಯಲ್ಲಿ ರಾಹುಲ್‌ ಗಾಂಧಿ ಕೂಡ ಉಪಸ್ಥಿತರಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಕೇಂದ್ರದಲ್ಲಿ ವಿರೋಧ ಪಕ್ಷಗಳ ಒಗ್ಗಟಿನ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮುಂಬರುವ ಸಂಸತ್‌ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಸಮಾನ ಮನಸ್ಕ ವಿರೋಧ ಪಕ್ಷಗಳು ಒಂದೇ ವೇದಿಕೆಯಲ್ಲಿ ಒಗ್ಗೂಡಬೇಕು ಎಂಬ ವಿಷಯದ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಇದೇ ವಿಷಯದ ಬಗ್ಗೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಖರ್ಗೆ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಚರ್ಚೆ ಮಾಡಿದ್ದಾರೆ. ಈ ಬೆನ್ನಲೇ ಶರದ್‌ ಪವಾರ್‌ ಅವರು ಖರ್ಗೆ ಅವರನ್ನು ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.

ಶರದ್ ಪವಾರ್ ಇತ್ತೀಚೆಗೆ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರನ್ನು ಬೆಂಬಲಿಸಿ ಮಾತನಾಡಿದ್ದರು. ಜಂಟಿ ಸಂಸದೀಯ ಸಮಿತಿಯ ತನಿಖೆಯ ಬದಲು ಅದಾನಿ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ತನಿಖೆ ಮಾಡಬೇಕು ಎಂದು ಹೇಳಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!