Mysore
26
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಕೊಡಗು|ಸ್ವಿಫ್ಟ್ ಕಾರು ಹಾಗೂ KSRTC ಬಸ್ ನಡುವೆ ಭೀಕರ ಅಪಘಾತ: 6 ಮಂದಿ ಮೃತ

ಮಡಿಕೇರಿ: ಮಡಿಕೇರಿ-ಮಂಗಳೂರು ಹೆದ್ದಾರಿಯ ಸಂಪಾಜೆ ಪೆಟ್ರೋಲ್ ಪಂಪ್ ಬಳೆ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಸ್ವಿಫ್ಟ್ ಕಾರು ಮತ್ತು ಕೆಎಸ್ಸಾರ್ಟಿಸಿ ಬಸ್ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಆಸ್ಪತ್ರೆಗೆ ಸಾಗಿಸುವ ದಾರಿಯಲ್ಲಿ ಮೃತಪಟ್ಟಿದ್ದಾರೆ.

ಕಾರು ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದರೆ ಬಸ್ಸು ಮಂಗಳೂರಿನಿಂದ ಮಡಿಕೇರಿ ಕಡೆಗೆ ಹೋಗುತ್ತಿತ್ತು. ಕಾರಿನಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು.

ಕಾರಿನಲ್ಲಿದ್ದವರೆಲ್ಲ ಮೂಲತಃ ಮಂಡ್ಯ ಜಿಲ್ಲೆಯವರು. ಅವರು ಎಲ್ಲಿಗೆ ಹೋಗುತ್ತಿದ್ದರು ಎಂಬ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ದ.ಕನ್ನಡ ಜಿಲ್ಲೆಯ ಸುಳ್ಯ ಕೆವಿಜಿ ಆಸ್ಪತ್ರೆಗೆ ಸಾಗಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!