Mysore
22
overcast clouds

Social Media

ಗುರುವಾರ, 11 ಜೂನ್ 2026
Light
Dark

ಕ್ಯೂನಲ್ಲಿ ನಿಂತು ಮತ ಚಲಾಯಿಸಿದ ಸುಧಾಮೂರ್ತಿ ದಂಪತಿ

ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕ್ಯೂನಲ್ಲಿ ನಿಂತು ಇನ್ಫೋಸಿಸ್ ಮುಖ್ಯಸ್ಥೆ ಸುಧಾ ಮೂರ್ತ ದಂಪತಿ ಮತದಾನ ಮಾಡಿದರು.
ಬೆಂಗಳೂರಿನ ಜಯನಗರದಲ್ಲಿ ಸುಧಾಮೂರ್ತಿ ಹಾಗೂ ನಾರಾಯಣ ಮೂರ್ತಿ ದಂಪತಿ ಮತ ಚಲಾಯಿಸಿದರು. ಈ ವೇಳೆ ಸುಧಾಮೂರ್ತಿ ನೆರೆದಿದ್ದ ಜನರ ಜೊತೆ ಕೆಲಕಾಲ ಮಾತುಕತೆ ನಡೆಸಿದರು. ಈ ವೇಳೆ ಸುಧಾಮೂರ್ತಿ ಜೊತೆಗೆ ಜನರು ಸೆಲ್ಫಿಗೆ ಮುಗಿಬಿದ್ದ ದೃಶ್ಯ ಕಂಡುಬಂತು.
ನಂತರ ಮಾತನಾಡಿದ ಅವರು, ಪ್ರಜಾಪ್ರಭುತ್ವದಲ್ಲಿ ಬದಲಾವಣೆ ತರಬೇಕಾದರೇ ಮತದಾನ ಮಾಡಲೇಬೇಕು. ದೇಶಭಕ್ತಿ ಇಲ್ಲದೇ ಇದ್ದವರು ಮಾತ್ರ ಮತದಾನ ಮಿಸ್ ಮಾಡಿಕೊಳ್ಳತ್ತಾರೆ. ಯುವಜನರೇ ನಮ್ಮ ನೋಡಿ ಕಲಿಯಿರಿ. ಎಲ್ಲರೂ ಮತದಾನ ಮಾಡಿ. ನಿಮ್ಮ ಹಕ್ಕನ್ನು ಚಲಾಯಿಸಿ ಎಂದು ಮನವಿ ಮಾಡಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!