Mysore
29
overcast clouds

Social Media

ಬುಧವಾರ, 17 ಜೂನ್ 2026
Light
Dark

ಕಾಂಗ್ರೆಸ್​ ಗ್ಯಾರಂಟಿ ಜಾರಿಗೆ ಸಿದ್ಧತೆ : ಹಣಕಾಸು ಇಲಾಖೆ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಸಭೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್​ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್​ ಸಿದ್ಧತೆ ನಡೆಸಿದೆ. ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಗ್ರಹಣಕ್ಕೂ ಮುನ್ನ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.

ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಐ.ಎಸ್.ಎನ್​.​ ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಮುಂದಾಗಿದ್ದು, ಅದಕ್ಕೂ ಮುನ್ನ ಈಗ ಅಧಿಕಾರಿಗಳ ಜತೆ ನಿಯೋಜಿತ ಸಿಎಂ ಚರ್ಚಿಸಿದ್ದಾರೆ.

ಕಾಂಗ್ರೆಸ್​ನ ಐದು ಗ್ಯಾರಂಟಿಗಳು ಯಾವುವು? : ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತರುತ್ತೇವೆ ಎಂದು ಕಾಂಗ್ರೆಸ್​ ಹೇಳಿದೆ. ಈ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿ ಅಕೌಂಟ್ ಸೇರಲಿದೆ ಎಂದು ಭರವಸೆ ನೀಡಿದೆ. ಎರಡನೇ ಗ್ಯಾರಂಟಿಯಾಗಿ ಮನೆ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತಾರಂತೆ. ಮೂರನೇ ಗ್ಯಾರಂಟಿ ಏನೆಂದರೆ, ಅನ್ನ ಭಾಗ್ಯದ ಮೂಲಕ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ. ನಾಲ್ಕನೇ ಗ್ಯಾರಂಟಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ನೀಡಲಾಗುವುದು. ಡಿಪ್ಲೊಮಾ ಪದವೀಧರರಿಗೆ ಒಂದೂವರೆ ಸಾವಿರ ರೂಪಾಯಿ ನೀಡುತ್ತಾರಂತೆ. ಐದನೇ ಗ್ಯಾರಂಟಿಯಾಗಿ ಎಲ್ಲ ಮಹಿಳೆಯರಿಗೆ ಉಚಿತ ಬಸ್​ ಪ್ರಯಾಣವನ್ನು ಕಾಂಗ್ರೆಸ್​ ಘೋಷಿಸಿದೆ.

62 ಸಾವಿರ ಕೋಟಿ ರೂ. ಹೊರೆ : ಅಂದಹಾಗೆ ಈ ಗ್ಯಾರಂಟಿಗಳನ್ನು ಈಡೆರಿಸಲು ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 62 ಸಾವಿರ ಕೋಟಿ ರೂ. ಅವಶ್ಯಕತೆ ಇದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಕಾಪಾಡಿಕೊಂಡು ಐದು ಗ್ಯಾರಂಟಿಗಳನ್ನು ಕಾಂಗ್ರೆಸ್​ ಹೇಗೆ ಜಾರಿಗೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!