Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

ಸಿಎಂ ಸ್ಥಾನ ಅಧಿಕಾರ ಹಂಚಿಕೆ ಬಗ್ಗೆ ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ : ಎಂಬಿ ಪಾಟೀಲ್

ಬೆಂಗಳೂರು : ಸಿಎಂ ಸ್ಥಾನ ಅಧಿಕಾರ ಹಂಚಿಕೆ ವಿಚಾರವಾಗಿ ತಾನು ಕೊಟ್ಟ ಹೇಳಿಕೆಯನ್ನು ಸಚಿವ ಎಂಬಿ ಪಾಟೀಲ್ ಸಮರ್ಥಿಸಿಕೊಂಡಿದ್ದು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದರು.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು,‌ಸಿಎಂ ಆಗಿ ಸಿದ್ದರಾಮಯ್ಯನವರೆ ಇರುತ್ತಾರೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.

ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು, ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು ಅದಕ್ಕೆ, ‌ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಅಂತ ನಮ್ಮ ನಾಯಕರು ಹೇಳಿದ್ದರು. ಕೆ.ಸಿ ವೇಣುಗೋಪಾಲ್ ಸುದ್ದಿಗೋಷ್ಠಿಯಲ್ಲಿ ಏನು ಹೇಳಿದ್ರೋ ನಾನು ಅದನ್ನು ಹೇಳಿದೆ ಎಂದರು.
ಸಿಎಂ ಸ್ಥಾನದಲ್ಲಿ ಪವರ್ ಶೇರಿಂಗ್ ಇಲ್ಲ. ಇದ್ರೆ ಅದು ಜನರ ಜೊತೆ ಮಾತ್ರ ಅಂತ‌ ಹೇಳಿದ್ರು. ನನ್ನದು ಯಾವುದೇ ಹೇಳಿಕೆ ಇಲ್ಲ. ನಾನು ವೈಯಕ್ತಿಕವಾಗಿ ಮಾತನಾಡಿಲ್ಲ. ಎಐಸಿಸಿ ಪ್ರದಾನ ಕಾರ್ಯದರ್ಶಿ ವೇಣುಗೋಪಾಲ್ ಹೇಳಿದ್ದನ್ನು ಅಷ್ಟೇ ನಾನು ಹೇಳಿದ್ದು. ಪವರ್ ಶೇರಿಂಗ್ ಇದ್ರೆ ಅದು ಜನರ ಜೊತೆ ಮಾತ್ರ ಅಂತ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯುತ್ತಾರೆ ಅಂತ ಹೇಳಿದ್ರು. ನಾನು ಅದನ್ನೆ ಹೇಳಿದ್ದೇನೆ

ಇನ್ನು ಸಚಿವ ಎಂಬಿ ಪಾಟೀಲ್ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿರೋಧ ವ್ಯಕ್ತಪಡಿಸಿದರು. ಡಿಕೆ ಸುರೇಶ್ ನಿವಾಸದ ಬಳಿ ಸಲೀಂ ಅಹಮದ್ ಮಾತನಾಡಿ, ಎಂಬಿ ಪಾಟೀಲ್ ಹೇಳಿಕೆ ನಾನು ನೋಡಿಲ್ಲ. ಆದರೆ ಏನೇ ಮಾತುಕತೆ ಆಗಿದ್ರೂ ಅದು ನಾಲ್ವರು ನಾಯಕರ ಮಧ್ಯೆ ಆಗಿರುವುದುಎಐಸಿಸಿ ಅಧ್ಯಕ್ಷರು, ಉಸ್ತುವಾರಿ ಹಾಗೂ ಇಬ್ಬರು ನಾಯಕರ ನಡುವೆ ಆಗಿರುವ ಮಾತುಕತೆ.‌ ಏನೇ ಇದ್ದರೂ ಅದು ಅವರಿಗೆ ಮಾತ್ರ ಗೊತ್ತಿದೆ ಎಂದರು. ನಮಗೆ ಸರ್ಕಾರ ಚೆನ್ನಾಗಿ ನಡೆಸಬೇಕು, ಜನರ ನಿರೀಕ್ಷೆ ಈಡೇರಿಸಬೇಕು.‌ವರಿಷ್ಟರ ತೀರ್ಮಾನದಂತೆ ಎಲ್ಲವೂ ನಡೆಯುತ್ತದೆ ಎಂದು ಹೇಳಿದರು.

ಇನ್ನು ಡಿಕೆ ಸುರೇಶ್ ಎಂಬಿ ಪಾಟೀಲ್ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ್ದು, ನಾನೂ ತೀಕ್ಷ್ಣವಾಗಿ ಎಚ್ಚರಿಕೆ ಕೊಡಬಲ್ಲೆ. ಆದರೆ ಈಗ ಅದು ಬೇಡ ಎಂದರು. ಇನ್ನು ದಿನೇಶ್ ಗುಂಡೂರಾವ್ ಪರೋಕ್ಷವಾಗಿ ಎಂಬಿ ಪಾಟೀಲ್ ಪರ ಹಾಗೂ ಸಿದ್ದರಾಮಯ್ಯ ಪರ ಬ್ಯಾಟಿಂಗ್ ಮಾಡಿದ್ದು, 2013 ರಲ್ಲಿ ಇಲ್ಲದ ಚರ್ಚೆ ಈಗ ಯಾಕೆ ಎಂದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!