Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ : ನಾಲ್ವರು ಸಾವು

ನಾಗಮಂಗಲ : ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟ ಘಟನೆ ತಾಲೂಕಿನ ತಿರುಮಲಾಪುರ ಬಳಿ ಭಾನುವಾರ ನಡೆದಿದೆ.
ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಹಿನ್ನೆಲೆಯಲ್ಲಿ ನೆಲಮಂಗಲದ ಶರತ್, ನವೀನ್, ಹೇಮಂತ್ ಸೇರಿ ನಾಲ್ವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮೃತನ ವಿವರ ದೊರೆತಿಲ್ಲ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ತಿರುಮಲಾಪುರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು ಕಾರಿನಲ್ಲಿದ್ದವರು ಬೆಂಗಳೂರಿನಿಂದ ಹಾಸನ ಕಡೆ ಹೋಗುತ್ತಿದ್ದರು,. ಇವರ ಕಾರು ತಿರುಮಲಾಪುರ ಗೇಟ್ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ಮುಂದೆ ಚಲಿಸುತ್ತಿದ್ದ ತ್ಯಾಜ್ಯ ಸಾಗಾಟದ ಲಾರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದಿದೆ .
ಕಾರಿನ ಮುಂಭಾಗ ಸಂಪೂರ್ಣ ನಜ್ಜು ಗುಜ್ಜಾಗಿದ್ದು ಅಪಘಾತದ ಭೀಕರತೆಯನ್ನು ಬಿಂಬಿಸಿದೆ.

ಘಟನಾ ಸ್ಥಳಕ್ಕೆ ನಾಗಮಂಗಲ ಡಿವೈಎಸ್ಪಿ ಲಕ್ಷ್ಮಿ ಪ್ರಸಾದ್, ಸಿಪಿಐ ನಿರಂಜನ್ ಹಾಗೂ ಬೆಳ್ಳೂರು ಪೊಲೀಸ್ ಠಾಣೆ ಪಿಎಸ್ ಐ ಲೋಕೇಶ್ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!