ಮೈಸೂರು : ಬೆಳ್ಳಂಬೆಳಗ್ಗೆ ಮೈಸೂರು ಖಾಕಿ ಪಡೆ ರೌಡಿಗಳಿಗೆ ಬಿಸಿ ಮುಟ್ಟಿಸಿದೆ. ದೇವರಾಜ ಉಪ ವಿಭಾಗದ ಆಲನಹಳ್ಳಿ ಪೊಲೀಸ್ ಠಾಣೆ ಆವರಣದಲ್ಲಿ ರೌಡಿಗಳಿಗೆ ಎಚ್ಚರಿಕೆ ನೀಡಲಾಗಿದೆ. ಉದಯಗಿರಿ, ದೇವರಾಜ, ಲಷ್ಕರ್, ಅಲನಹಳ್ಳಿ, ನಜರ್ಬಾದ್ ಠಾಣೆಗಳ ಎಲ್ಲ ರೌಡಿಗಳನ್ನು ಕರೆಸಿ ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ನೀಡಬಾರದು.ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಬಾರದು.ಸಮಾಜದಲ್ಲಿ ಶಾಂತಿಗೆ ಭಂಗ ತರುವ ಕೆಲಸ ಮಾಡಬಾರದು ಎಂದು ಎಚ್ಚರಿಕೆ ನೀಡಲಾಗಿದೆ.
ಪರೇಡ್ ನಡೆಸಿದ ದೇವರಾಜ ವಿಭಾಗದ ಎಸಿಪಿ ಶಾಂತಮಲ್ಲಪ್ಪ., ನೂತನ ಗೃಹ ಸಚಿವರಾದ ಡಾ. ಜಿ ಪರಮೇಶ್ವರ ರವರ ಹಾಗೂ ನೂತನ ಡಿಜಿ & ಐಜಿಪಿ ಅಲೋಕ್ ಮೋಹನ್ ರವರ ಆದೇಶ ದಂತೆ ಇಂದು ದೇವರಾಜ ಉಪವಿಭಾಗದ ವತಿಯಿಂದ ರೌಡಿ ಪೆರೇಡ್ ನಡೆಸಲಾಗಿದೆ. ಎಸಿಪಿ ಶಾಂತಮಲ್ಲಪ್ಪ ರವರು ಮಾತನಾಡಿ ಯಾವುದೇ ಕಾನೂನು ಬಾಹಿರ ಚಟುವಟಿಕೆ ಗಳಲ್ಲಿ ಭಾಗಿಯಾಗದಂತೆ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.ಹಾಗೊಂದು ವೇಳೆ ಭಾಗಿಯಾದಲ್ಲಿ ಗೂಂಡಾ ಕಾಯ್ದೆಯಂತಹ ಕಾನೂನು ಬಳಸಿ ಹತ್ತಿಕ್ಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಎಲ್ಲರೂ ಸನ್ನಡತೆ ಯಿಂದ ಇರುವಂತೆ ಸೂಚಿಸಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್ ಪೆಕ್ಟ್ ರ್ ಗಳಾದ ಪಿ.ಪಿ ಸಂತೋಷ್, ಜೀವನ್, ಪಿ.ಕೆ. ರಾಜು, ಟಿ.ಬಿ ಶಿವಕುಮಾರ್ ಹಾಗೂ ವಿಭಾಗದ ಎಲ್ಲ ಪಿ ಎಸ್ ಐ ಗಳು ಹಾಗೂ ಅಪರಾಧ ವಿಭಾಗದ ಸಿಬ್ಬಂದಿಗಳು ಹಾಜರಿದ್ದರು.




