Mysore
23
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಪರಿಸರ ಸಂರಕ್ಷಣೆ ಕುರಿತು ಮಕ್ಕಳಲ್ಲಿ ಜಾಗೃತಿ ಅತ್ಯಗತ್ಯ: ದಫೆದಾರ್ ಸುರೇಶ್

ಮೈಸೂರು : ಪರಿಸರವು ಮಾನವರಿಗೆ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿ, ಸಸ್ಯ ಇತ್ಯಾದಿಗಳಿಗೆ ಅತ್ಯಮೂಲ್ಯ ಕೊಡುಗೆಯಾಗಿದೆ ಎಂದು ಪೊಲೀಸ್ ದಫೆದಾರ್ ಸುರೇಶ್ ಟಿ ಚಕ್ಕೋಡನಹಳ್ಳಿ ಹೇಳಿದರು.

ಎಚ್ ಡಿ ಕೋಟೆ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಆವರಣದಲ್ಲಿ ಆಯೋಜಿಸಿದ್ದ ಪರಿಸರವನ್ನು ಉಳಿಸಿ ಬೆಳೆಸಿ ಎಂಬ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು,

ಪರಿಸರದ ಮುಖ್ಯವಾದ ಅಂಶಗಳೆಂದರೆ ಗಾಳಿ, ನೀರು, ಮಣ್ಣು, ಅರಣ್ಯ , ಇತ್ಯಾದಿಗಳು ಯಾವುದೇ ಅಡೆತಡೆಯಿಲ್ಲದ ಉಳಿಯುವುದು ಬಹಳ ಮುಖ್ಯವಾಗಿದ್ದು, ಪ್ರತಿಯೊಬ್ಬರೂ ಪರಿಸರದ ಸಂರಕ್ಷಣೆಗೆ ಹೆಚ್ಚಿನ ಆದ್ಯತೆಯನ್ನು ನೀಡಬೇಕು. ಹೆಚ್ಚುತ್ತಿರುವ ಮಾಲಿನ್ಯದ ಮಟ್ಟದಿಂದ ಪರಿಸರ ಪರಿಸ್ಥಿತಿಗಳು ಬಿಗಡಾಯಿಸುತ್ತಿದೆ. ಹಾಗಾಗಿ ರಕ್ಷಣೆ ಮತ್ತು ಸುಸ್ಥಿರ ಬಳಕೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಲು ಇಂತಹ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ. ಉತ್ತಮ ಪರಿಸರ ಉತ್ತಮ ಆರೋಗ್ಯಕ್ಕೆ ಕಾರಣವಾಗುತ್ತದೆ. ನಮ್ಮ ಸುತ್ತಲಿನ ಪರಿಸರ ಎಷ್ಟು ಚೆನ್ನಾಗಿರುತ್ತೆ ಅಷ್ಟು ನಾವು ಆರೋಗ್ಯವಾಗಿರುತ್ತೇವೆ. ಪರಿಸರ ಹಾಳಾದಷ್ಟು ನಮ್ಮ ಆರೋಗ್ಯ ಹಾಳಾಗುತ್ತದೆ. ಎಂದರು..

ಕಾರ್ಯಕ್ರಮದಲ್ಲಿ ಪುರಸಭಾ ಸದಸ್ಯ ಸುಹಾಸಿನಿ ದಿನೇಶ್, ಎಸ್. ಡಿ. ಎಂ. ಸಿ. ಅಧ್ಯಕ್ಷ ಸಿದ್ದರಾಜು , ಸರ್ಕಾರಿ ಮಹಿಳಾ ಪ್ರೌಢಶಾಲೆ ಉಪಪ್ರಾಂಶುಪಾಲ ವಿ.ಸಿ ಮಂಜುನಾಥ್ ಹಾಗೂ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!