Mysore
22
broken clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಭಯೋತ್ಪಾದಕರ ಪ್ರಕರಣ ಸಿಸಿಬಿ ತನಿಖೆಗೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಸಂಚು ರೂಪಿಸಿದ್ದ ಭಯೋತ್ಪಾದಕರ ಪ್ರಕರಣವನ್ನು ಸಿಸಿಬಿ ತನಿಖೆಗೆ ವಹಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ಬಿಜೆಪಿ, ಜೆಡಿಎಸ್‍ನ ಸದಸ್ಯರ ಗದ್ದಲದ ನಡುವೆಯೂ ಸ್ವಯಂಪ್ರೇರಿತವಾಗಿ ಮಹತ್ವದ ಹೇಳಿಕೆ ನೀಡಿದ ಗೃಹ ಸಚಿವರು ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿದರು.

ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದ ಪೊಲೀಸರು ಐವರು ಶಂಕಿತರನ್ನು ಬಂಸಿದ್ದಾರೆ.

ಸದರಿ ಆರೋಪಿಗಳು ಹಲವು ದಿನಗಳಿಂದಲೂ ಶಸ್ತ್ರಾಸ್ತ್ರ, ಮದ್ದುಗುಂಡು, ಸಲಕರಣೆ ಸೇರಿದಂತೆ ಹಲವಾರು ವಸ್ತುಗಳನ್ನು ಸಂಗ್ರಹಿಸಿ ದೇಶದ ಐಕ್ಯತೆ, ಸಾರ್ವಭೌಮತ್ವಕ್ಕೆ ಧಕ್ಕೆ ತರುವ ವಿಧ್ವಂಸಕ ಕೃತ್ಯವಾದ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ.

ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಸಿದ್ದಾರೆ. ಇವರುಗಳಿಂದ 7 ನಾಡ ಪಿಸ್ತೂಲುಗಳು, 45 ಜೀವಂತ ಗುಂಡು, ವಾಕಿಟಾಕಿ, 12 ಮೊಬೈಲ್ ಸೇರಿದಂತೆ ಹಲವಾರು ಆಕ್ಷೇಪಾರ್ಹ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿವರಿಸಿದರು.

ಈ ಆರೋಪಿಗಳು ಜೈಲಿನಲ್ಲಿರುವ ಖೈದಿಗಳ ಜೊತೆ ಸಂಪರ್ಕದಲ್ಲಿರುವುದು ಪತ್ತೆಯಾಗಿದೆ. ಶಾಂತಿ ಸುವ್ಯವಸ್ಥೆಗೆ ಭಂಗ ತರುವಂತ ವಿಧ್ವಂಸಕ ಕೃತ್ಯ ನಡೆಸುವ ಸಂಚಿನಲ್ಲಿ ಭಾಗಿಯಾಗಿದ್ದರು. ಈ ಹಿಂದೆ ಹಲವಾರು ಕೊಲೆ, ಸುಲಿಗೆ ಪ್ರಕರಣಗಳಲ್ಲೂ ತೊಡಗಿಸಿಕೊಂಡಿದ್ದರು. ದೇಶದ್ರೋಹಿ ಭಯೋತ್ಪಾದನಾ ಚಟುವಟಿಕೆಯಲ್ಲಿ ತೊಡಗಿದ್ದ ಈ ಆರೋಪಿಗಳನ್ನು ಹೆಬ್ಬಾಳ ಪೆÇಲೀಸ್ ಠಾಣಾ ಪೆÇಲೀಸರು ಬಂಸುವ ಮೂಲಕ ಸಂಭವನೀಯ ದಾಳಿಯನ್ನು ತಡೆದಿದ್ದಾರೆ ಎಂದರು.

ಸದರಿ ಆರೋಪಿಗಳು ನಿಷೇತ ಭಯೋತ್ಪಾದಕ ಸಂಘಟನೆಗಳ ಜೊತೆ ಸಂಪರ್ಕದಲ್ಲಿರುವುದು ಶಸ್ತ್ರಾಸ್ತ್ರಗಳನ್ನು ಸಂಗ್ರಹಿಸಲು ಅನುಸರಿಸಿದ ಮಾರ್ಗಗಳು ಹಾಗೂ ಯಾವ ರೀತಿಯ ವಿಧ್ವಂಸಕ ಕೃತ್ಯವನ್ನು ನಡೆಸಲು ಸಂಚು ರೂಪಿಸಿದ್ದರು ಎಂಬ ವಿಚಾರಗಳ ತನಿಖೆಗೆ ಪ್ರಕರಣವನ್ನು ಸಿಸಿಬಿ ತನಿಖೆಗೆ ಒಪ್ಪಿಸಿರುವುದಾಗಿ ತಿಳಿಸಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!