Mysore
22
overcast clouds

Social Media

ಭಾನುವಾರ, 14 ಜೂನ್ 2026
Light
Dark

‌ ಗೃಹ ಸಚಿವರ ಮನೆಗೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರ ಮುತ್ತಿಗೆ : ಪರಮೇಶ್ವರ್ ನಿವಾಸಕ್ಕೆ ಪೊಲೀಸ್ ಭದ್ರತೆ

ಬೆಂಗಳೂರು : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯೊಬ್ಬರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಈಗಾಗಲೇ ವರದಿಯಾಗಿರುವಂತೆ ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲೇ ಸಚಿವರ ಸದಾಶಿವನಗರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪಡೆಯ ತುಕಡಿಯೊಂದನ್ನು ಅವರ ಮನೆ ಸುತ್ತ ನಿಯೋಜಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!