Mysore
21
clear sky

Social Media

ಗುರುವಾರ, 26 ಫೆಬ್ರವರಿ 2026
Light
Dark

ಸೆಲ್ಫಿ ತೆಗೆಯುತ್ತಿದ್ದ ಯುವಕನ ಮೇಲೆ ಹರಿದ ರೈಲು : ಸ್ಥಳದಲ್ಲೇ ಸಾವು

ಉತ್ತರ ಪ್ರದೇಶ : ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಯುವಕನ ಮೇಲೆ ರೈಲು ಹರಿದು ಆತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ವಂಶ್ ಎಂದು ಗುರುತಿಸಲಾಗಿದ್ದು, ಬೆಳಗ್ಗೆ ತನ್ನ ಮೂವರು ಸ್ನೇಹಿತರೊಂದಿಗೆ ದ್ವಾರಕಾ ಧೀಶ್ ದೇವಸ್ಥಾನಕ್ಕೆ ಭೇಟಿ ನೀಡಲು ಹೋದಾಗ ತಿವಾರಿಪುರಂ ರೈಲ್ವೆ ಸೇತುವೆಯಲ್ಲಿ ಈ ಘಟನೆ ನಡೆದಿದೆ.

ಹೋಲಿ ಗೇಟ್ ನಲ್ಲಿ ವಾಹನ ದಟ್ಟಣೆಯಿಂದಾಗಿ ಮೂವರು ಜಮುನಾ ಪ್ರದೇಶದ ತಿವಾರಿಪುರಂ ಕಡೆಗೆ ತೆರಳಿದರು. ಅಲ್ಲಿ ಸ್ಕೂಟರ್ ನಿಲ್ಲಿಸಿ ಸೇತುವೆಯ ಮೇಲೆ ಸೆಲ್ಫಿ ತೆಗೆದುಕೊಳ್ಳುತ್ತಿದ್ದರು.

ಬಳಿಕ ರೈಲು ಸಮೀಪಿಸುತ್ತಿದ್ದಂತೆ, ಅದನ್ನು ತಪ್ಪಿಸಲು ಸ್ನೇಹಿತರು ತಕ್ಷಣವೇ ಸೇತುವೆಯ ಒಂದು ಬದಿಗೆ ತೆರಳಿದರು, ಆದರೆ ವಂಶ್ ಮಾತ್ರ ಟ್ರ್ಯಾಕ್ ಬಳಿ ಹೆಜ್ಜೆ ಹಾಕಿದ್ದಾನೆ, ಬಲವಾದ ಗಾಳಿಯನ್ನು ತಡೆಯಲಾಗಲಿಲ್ಲ. ಈ ವೇಳೆ ರೈಲಿಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಎಸ್‌ಎಸ್‌ಪಿ ಶೈಲೇಶ್‌ ಕುಮಾರ್‌ ಪಾಂಡೆ ಅವರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಿ, ನದಿ ದಡಗಳು ಮತ್ತು ರೈಲ್ವೆ ಹಳಿಗಳಂತಹ ಅಪಾಯಕಾರಿ ಸ್ಥಳಗಳ ಬಳಿ ಸೆಲ್ಫಿ ತೆಗೆದುಕೊಳ್ಳುವಾಗ ಜಾಗರೂಕರಾಗಿರಿ ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!