Mysore
25
few clouds

Social Media

ಬುಧವಾರ, 11 ಫೆಬ್ರವರಿ 2026
Light
Dark

ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕಿದ್ದಗಾಂಧಿ ಮರಿಮೊಮ್ಮಗ ಅರೆಸ್ಟ್

ಮುಂಬೈ : ಕ್ವಿಟ್ ಇಂಡಿಯಾ ಚಳವಳಿ ನಿಮಿತ್ತ ಹಮ್ಮಿಕೊಂಡಿದ್ದ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ನನ್ನನ್ನು ಪೊಲೀಸರು ಬಂಧಿಸಿದ್ಧಾರೆ ಎಂದು ಮಹಾತ್ಮ ಗಾಂಧಿ ಅವರ ಮರಿಮೊಮ್ಮಗ ತುಷಾರ್ ಗಾಂಧಿ ಆರೋಪಿಸಿದ್ದಾರೆ.

ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್ ಸೇರಿದಂತೆ ಇತರರೊಂದಿಗೆ ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗವಹಿಸಲು ತೆರಳಬೇಕಿದ್ದ ನನ್ನನ್ನು ಮುಂಬೈನ ಮನೆಯಿಂದ ಇಂದು ಬೆಳಿಗ್ಗೆ ಪೊಲೀಸರು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

1942 ರಲ್ಲಿ ಬ್ರಿಟಿಷರ ವಿರುದ್ಧ ಕ್ವಿಟ್ ಇಂಡಿಯಾ ಚಳುವಳಿಯ ಪ್ರಾರಂಭವನ್ನು ಗುರುತಿಸಲು ಆಯೋಜಿಸಲಾದ ಪ್ರತಿಭಟನೆಯನ್ನು ಶಾಂತಿ ಮಾರ್ಚ್ ಎಂದು ಹೆಸರಿಸಲಾಗಿದೆ. ಸೆಟಲ್ವಾಡ್ ಅವರಲ್ಲದೆ, ಸ್ವಾತಂತ್ರ್ಯ ಹೋರಾಟಗಾರ ಜಿಜಿ ಪಾರಿಖ್ ಕೂಡ ಮೆರವಣಿಗೆಯಲ್ಲಿ ಭಾಗವಹಿಸಲಿದ್ದಾರೆ. ಕ್ವಿಟ್ ಇಂಡಿಯಾ ಚಳವಳಿಯಲ್ಲಿ ವಿದ್ಯಾರ್ಥಿ ಸ್ವಯಂಸೇವಕರಾಗಿ ಭಾಗವಹಿಸಿದ್ದಕ್ಕಾಗಿ ಪಾರಿಖ್ ಅವರನ್ನು ಜೈಲಿಗೆ ಹಾಕಲಾಯಿತು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!