Mysore
23
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಕಾಳಮ್ಮ ದೇವಾಲಯದ ಹುಂಡಿ ಹೊಡೆದು ಹಣ ದೋಚಿದ ಕಳ್ಳರು

ಮಂಡ್ಯ : ಇಲ್ಲಿನ ಗಾಂಧಿನಗರ ೬ನೇ ಕ್ರಾಸ್‌ನಲ್ಲಿರುವ ಶ್ರೀ ಕಾಳಮ್ಮ ದೇವಾಲಯದ ಬೀಗ ಮುರಿದು ಒಳನುಗ್ಗಿರುವ ಕಳ್ಳರು ಹುಂಡಿಯಲ್ಲಿದ್ದ ಲಕ್ಷಾಂತರ ರೂ. ಹಣವನ್ನು ದೋಚಿ ಪರಾರಿಯಾಗಿದ್ದಾರೆ.

ದೇವಾಲಯದ ಹುಂಡಿಯಲ್ಲಿದ್ದ ಅಂದಾಜು ೧.೫೦ ಲಕ್ಷಕ್ಕೂ ಹೆಚ್ಚು ಹಣವನ್ನು ಕಳ್ಳರು ದೋಚಿ ಪರಾರಿಯಾಗಿದ್ದಾರೆ.

ಇತ್ತೀಚೆಗೆ ಪ್ರಸಿದ್ಧಿಯಾಗಿರುವ ಶ್ರೀ ಕಾಳಮ್ಮ ದೇವಾಲಯಕ್ಕೆ ಮಂಗಳವಾರ ಮಧ್ಯರಾತ್ರಿ ವೇಳೆ ಬೀಗ ಮುರಿದು ಒಳನುಗ್ಗಿರುವ ಕಳ್ಳರು ದೇವಾಲಯದ ಪ್ರಾಂಗಣದಲ್ಲಿದ್ದ ಹುಂಡಿಯನ್ನು ಪಕ್ಕಕ್ಕೆ ಹೊತ್ತೊಯ್ದು ಹೊಡೆದು ಹಾಕಿ ಅದರಲ್ಲಿದ್ದ ಹಣವನ್ನು ದೋಚಿದ್ದಾರೆ. ಹುಂಡಿಯಲ್ಲಿದ್ದ ನಾಣ್ಯಗಳನ್ನು ಅಲ್ಲೇ ಬಿಟ್ಟಿದ್ದು, ಇನ್ನುಳಿದ ನೋಟುಗಳನ್ನೆಲ್ಲ ದೋಚಲಾಗಿದೆ.

ಬುಧವಾರ ಬೆಳಿಗ್ಗೆ ಭಕ್ತರು ಹೋದ ವೇಳೆ ದೇವಾಲಯದ ಬಾಗಿಲ ಬೀಗ ಮುರಿದಿರುವುದು ಕಂಡುಬಂದಿದ್ದು, ಪರಿಶೀಲಿಸಿದಾಗ ಹುಂಡಿ ದೋಚಿರುವುದು ಬೆಳಕಿಗೆ ಬಂದಿದೆ.

ದೇವಾಲಯದ ಉಸ್ತುವಾರಿ ಮುಖಂಡರ ಅಂದಾಜಿನಂತೆ ೧.೫೦ ಲಕ್ಷಕ್ಕೂ ಹೆಚ್ಚು ಹಣ ಹುಂಡಿಯಲ್ಲಿತ್ತು. ಅದನ್ನೆಲ್ಲ ಕಳ್ಳರು ದೋಚಿ ಹೋಗಿದ್ದಾರೆ ಎಂದು ತಿಳಿಸಿದ್ದಾರೆ. ಪಶ್ಚಿಮ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!