ಮೈಸೂರು : ಜನಪರ ಹೋರಾಟಗಾರ, ಅಂಬೇಡ್ಕರ್ ವಾದಿ, ವೈಚಾರಿಕ ಚಿಂತಕ, ವಿಚಾರವಾದಿ, ಕ್ರಾಂತಿಕಾರಿ ಮಂಟೇ ಲಿಂಗಯ್ಯ ರವರು ಮೈಸೂರಿನ ಸ್ವಗೃಹದಲ್ಲಿ ಸೋಮವಾರ ಸಂಜೆ ನಿಧನರಾಗಿದ್ದಾರೆ.
ಹಠಾತ್ ಹೃದಯಾಘಾತಕ್ಕೊಳಗಾದ ಹಿನ್ನಲೆಯಲ್ಲಿ ಮಂಟೇಲಿಂಗಯ್ಯ ರವರು ಇಹಲೋಕ ತ್ಯಜಿಸಿದ್ದು, ಕೆಸರೆ ಯಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮೃತರ ಅಂತ್ಯ ಕ್ರಿಯೆ ಮಂಗಳವಾರ ನಡೆಯಲಿದೆ.
ಬಡ ಜನರ ಪರ ಕಾಳಜಿ ಹೊಂದಿದ್ದ ಮಂಟೇ ಲಿಂಗಯ್ಯ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಿ ಹೋರಾಟ ಮಾಡಿದವರಲ್ಲಿ ಮುಂಚೂಣಿಗರು. ಅಧಿಕಾರಸ್ತರು, ಜನಪ್ರತಿನಿಧಿಗಳು ಮತ್ತು ಆಳುವ ಸರ್ಕಾರಕ್ಕೆ ಸಿಂಹ ಸ್ವಪ್ನ ರಾಗಿದ್ದ ಅವರು ಹೋರಾಟದ ಮೂಲಕವೇ ಸಮಾಜವನ್ನು ಎಚ್ಚರಿಸಿದ್ದರು.
ಸದಾ ಕಾಲ ನೊಂದ ಜನರ ಸಂಕಷ್ಟಕ್ಕೆ ಮಿಡಿಯುತ್ತಿದ್ದ ಅವರು ಎಜೆಎಂಎಸ್ ಸಂಘಟನೆ ಹುಟ್ಟು ಹಾಕಿ ಜನಪರ ಚಳವಳಿಯಲ್ಲಿ ಸಕ್ರಿಯರಾಗಿದ್ದರು.