ಬೆಂಗಳೂರು : ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು.
ತನ್ನ ಹಿಂದಿನ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್ ಮಿನಿಸ್ಟರ್ ಪ್ರಿಯಾಂಕ್ ತವರು ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್ಟೇಬಲ್ ಮೇಲೆ ಮರಳು ಮಾಫಿಯಾ ಟ್ರ್ಯಾಕ್ಟರ್ ಹರಿಸಿ ಬಲಿ ಪಡೆಯಲಾಯಿತು.
ಜಿಲ್ಲಾ ಉಸ್ತುವಾರಿ ಸಚಿವರುಗಳ ದೌಲತ್ತು, ಧಿಮಾಕುಗಳು ಜೋರಾಯಿತು. ಆಯಾ ಜಿಲ್ಲೆಗಳಲ್ಲಿ ಅಕ್ರಮ ದಂಧೆಗಳು ತಲೆ ಎತ್ತಲಾರಂಭಿಸಿದವು. ಅಸಲಿಗೆ ತುಘಲಕ್ ದರ್ಬಾರ್ಗೆ ಕಡಿವಾಣವೇ ಇಲ್ಲದಂತಾಯಿತು ಎಂದು ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.





