Mysore
23
scattered clouds

Social Media

ಸೋಮವಾರ, 15 ಜೂನ್ 2026
Light
Dark

ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು : ಬಿಜೆಪಿ

ಬೆಂಗಳೂರು : ಗ್ಯಾರಂಟಿಗಳಿಗೆ ಹಣವಿಲ್ಲದೆ ಸಿದ್ದರಾಮಯ್ಯ ಪತರಗುಟ್ಟಿ ಹೋಗಿದ್ದಾರೆ. ಸಚಿವರು ಅಕ್ರಮ ದಂಧೆಗಳಿಗೆ ನಾಂದಿಯಾಡಿದರು.

ತನ್ನ ಹಿಂದಿನ‌ ಹಳೆಯ ವೈಖರಿಯಂತೆ ಮರಳು ಮಾಫಿಯಾ ಜಾರಿಗೆ ತಂದಿತು. ಟ್ರೋಲ್​ ಮಿನಿಸ್ಟರ್​ ಪ್ರಿಯಾಂಕ್ ತವರು‌ ಜಿಲ್ಲೆಯಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಕಾನ್ಸ್​ಟೇಬಲ್​ ಮೇಲೆ ಮರಳು ಮಾಫಿಯಾ ಟ್ರ್ಯಾಕ್ಟರ್ ಹರಿಸಿ ಬಲಿ ಪಡೆಯಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವರುಗಳ ದೌಲತ್ತು, ಧಿಮಾಕುಗಳು ಜೋರಾಯಿತು. ಆಯಾ ಜಿಲ್ಲೆಗಳಲ್ಲಿ ಅಕ್ರಮ ದಂಧೆಗಳು ತಲೆ ಎತ್ತಲಾರಂಭಿಸಿದವು. ಅಸಲಿಗೆ ತುಘಲಕ್ ದರ್ಬಾರ್‌ಗೆ ಕಡಿವಾಣವೇ ಇಲ್ಲದಂತಾಯಿತು ಎಂದು ಸರಣಿ ಟ್ವೀಟ್​ ಮೂಲಕ ಕಾಂಗ್ರೆಸ್​​ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!