Mysore
25
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

ಉದಯನಿಧಿ ಸ್ಟಾಲಿನ್‌ ಇನ್ನೂ ಬಚ್ಚ : ಪ್ರಮೋದ್ ಮುತಾಲಿಕ್

ಧಾರವಾಡ : ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ತಿಳಿಸಿದ್ದಾರೆ.

ಧಾರವಾಡದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುತಾಲಿಕ್‌, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂಬ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಹೇಳಿಕೆಗೆ ತಿರುಗೇಟು ಕೊಟ್ಟಿದ್ದಾರೆ.

ಉದಯನಿಧಿ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಸನಾತನ ಧರ್ಮವನ್ನ ಡೆಂಗ್ಯೂ, ಮಲೇರಿಯಾದಂತೆ ನಾಶ ಮಾಡಬೇಕು ಎಂದು ಹೇಳುವುದು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತದೆ. ಇದನ್ನು ನಾವು ಖಂಡಿಸುತ್ತೇವೆ. ಉದಯನಿಧಿ ಇನ್ನೂ ಬಚ್ಚ, ಇನ್ನೂ ಕಣ್ಣೇ ಬಿಟ್ಟಿಲ್ಲ, ಆದ್ರೆ ಅತ್ಯಂತ ಕೀಳುಮಟ್ಟದ ಹೇಳಿಕೆ ನೀಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸನಾತನ ಧರ್ಮ ಶಾಂತಿಯ ಸಂದೇಶ ಸಾರುತ್ತದೆಯೇ ಹೊರತು, ಅದು ಡೆಂಗ್ಯೂ, ಮಲೇರಿಯಾದಂತೆ ರೋಗ ಹರಡುವ ಸೊಳ್ಳೆಯಲ್ಲ. ಸನಾತನ ಧರ್ಮ ಗಂಧದ ಮರ ಇದ್ದಂತೆ. ಅದನ್ನು ನಾಶ ಮಾಡಲು ಹೋದಷ್ಟೂ ಸುಗಂಧ ಹರಡುತ್ತದೆ ಎಂದು ಹೇಳಿದ್ದಾರೆ.

ಪೆರಿಯಾರ್‌ನಿಂದ ಹಿಡಿದು ಇಲ್ಲಿಯವರೆಗೂ ನಾಸ್ತಿಕವಾದ ಮಾಡುತ್ತಾ ಬಂದಿದ್ದಾರೆ. ಇವರ ಈ ಹೇಳಿಕೆಯಿಂದ ದೊಡ್ಡ ಅನಾಹುತ ಆಗುತ್ತದೆ. ನಿಮ್ಮ ರಾಜಕೀಯ ವ್ಯವಸ್ಥೆ ನಾಶವಾಗುತ್ತದೆ. ಅವರು ತಮ್ಮ ಹೇಳಿಕೆಯನ್ನ ವಾಪಸ್ ಪಡೆಯಬೇಕು. ಈ ಸಂಬಂಧ ಅವರ ವಿರುದ್ಧ ಧಾರವಾಡ, ಬೆಂಗಳೂರು ಹಾಗೂ ಕಲಬುರ್ಗಿ ಕೋರ್ಟ್‌ಗಳಲ್ಲಿ ಕೇಸ್ ದಾಖಲಿಸಲಿದ್ದೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!