Mysore
32
scattered clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

ಮೈಸೂರು ದಸರಾ : ಮಾವುತ, ಕಾವಾಡಿಗಳಿಗೆ ಉಪಹಾರ ಬಡಿಸಿದ ಎಚ್.ಸಿ ಮಹದೇವಪ್ಪ

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರ ಅಮಹೋತ್ಸವದ ಪ್ರಮುಖ ಆಕರ್ಷಣೆಯಾದ ದಸರಾ ಜಂಬೂಸವಾರಿ ಗಜಪಡೆಗಳ ಮಾವುತರು, ಕಾವಾಡಿಗಳು ಮತ್ತು ಕುಟುಂಬದವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೆಳಗಿನ ಉಹಾರ ಬಡಿಸುವ ಮೂಲಕ ಶುಭಹಾರೈಸಿದರು.

ಅರಮನೆ ಆವರಣದ ಜಯಮಾರ್ತಾಂಡ ದ್ವಾರದ ಬಳಿ ಶುಕ್ರವಾರ ಹಾಕಲಾಗಿದ್ದ ಪೆಂಡಾಲ್ ನಲ್ಲಿ ಮಾವುತರು, ಕಾವಾಡಿಗಳು ಮತ್ತು ಅವರ ಕುಟುಂಬದವರಿಗೆ ಇಡ್ಲಿ, ವಡೆ,ಚಟ್ನಿ, ಮಸಾಲೆ ದೋಸೆ, ಪೊಂಗಲ್, ಕೇಸರಿ ಬಾತ್, ಹೋಳಿಗೆ ಉಪ್ಪಿಟ್ಟನ್ನು ಬಡಿಸಲಾಯಿತು.

ಬಗೆ ಬಗೆಯ ತಿಂಡಿ ತಿನಿಸುಗಳನ್ನು ತಿಂದು ಮಾವುತ, ಕಾವಾಡಿಗಳು,ಮಕ್ಕಳು, ಸಂತಸ ಪಟ್ಟರು. ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ವೀರನಹೊಸಹಳ್ಳಿಯಿಂದ ಸೆ.1 ರಂದು ಅರಮನೆಗೆ ದಸರಾ ಗಜಪಡೆಗಳ ಮೊದಲ ತಂಡ ಆಗಮಿಸಿತ್ತು. ಎರಡನೇ ತಂಡ ಸೆ.25 ರಂದು ಆಗಮಿಸಿತ್ತು. ಈ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮತ್ತು ಅತಮನೆ ಮಂಡಳಿ ವತಿಯಿಂದ ಉಪಹಾರ ವ್ಯವಸ್ಥೆ ಮಾಡಿಕೊಂಡು ಬಂದಿರುವ ಮಾದರಿಯಲ್ಲಿ ಈ ವರ್ಷವೂ ಸಹ ಉಪಹಾರ ವ್ಯವಸ್ಥೆ ಮಾಡಲಾಗಿತ್ತು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!