Mysore
25
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಶಕ್ತಿಧಾಮದ ಮಕ್ಕಳೊಂದಿಗೆ ಗಾಂಧಿ ಜಯಂತಿ ಆಚರಿಸಿದ ಶಿವಣ್ಣ

ಮೈಸೂರು : ಇಂದು ಎಲ್ಲೆಡೆ ಮಹಾತ್ಮ ಗಾಂಧಿ ಹಾಗೂ ಬಹದ್ದೂರ್​ ಶಾಸ್ತ್ರಿ ಅವರ ಬಹದ್ದೂರ್​ ಶಾಸ್ತ್ರಿ ಅವರ ಆಚರಿಸಲಾಗುತ್ತಿದೆ.

ನಟ ಶಿವರಾಜ್​ಕುಮಾರ್​ ಕೂಡ ಮೈಸೂರಿನ ಶಕ್ತಿಧಾಮದಲ್ಲಿ ಮಕ್ಕಳ ಜೊತೆ ಸೇರಿ ಈ ನಾಯಕರ ಜಯಂತಿಯಲ್ಲಿ ಪಾಲ್ಗೊಂಡಿದ್ದಾರೆ. ಮಹಾತ್ಮ ಗಾಂಧಿ ಮತ್ತು ಲಾಲ್​ ಬಹದ್ದೂರ್​ ಶಾಸ್ತ್ರಿ ರೀತಿ ವೇಷ ಧರಿಸಿದ ಮಕ್ಕಳ ಜೊತೆ ನಿಂತು ಶಿವರಾಜ್​ಕುಮಾರ್​ ಅವರು ಪೋಸ್​ ನೀಡಿದ್ದಾರೆ. ಆ ಫೋಟೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಳ್ಳುವ ಮೂಲಕ ಅವರು ಶುಭ ಕೋರಿದ್ದಾರೆ.

ಇಂದು ನಮ್ಮ ಶಕ್ತಿಧಾಮ ಮಕ್ಕಳ ಜೊತೆ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಿದ್ದು ಸಂತೋಷವಾಯ್ತು. ಮಕ್ಕಳು ಈ ಧೀಮಂತ ನಾಯಕರ ಚಿಂತನೆಯನ್ನು ತಮ್ಮ ಜೀವನದಲ್ಲೂ ಅಳವಡಿಸಿಕೊಳ್ಳಲಿ’ ಎಂದು ಶಿವರಾಜ್​ಕುಮಾರ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ