Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ಇಬ್ಬರು ಇಂಜಿನಿಯರ್ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ದಾಳಿ

ಮಂಡ್ಯ : ಆದಾಯ ಮೀರಿ ಆಸ್ತಿ ಗಳಿಕೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಎರಡು ಕಡೆ ಲೋಕಾಯುಕ್ತ ಅಧಿಕಾರಿಗಳ ತಂಡ ಸೋಮವಾರ ದಾಳಿ ಮಾಡಿದ್ದು, ಮನೆಗಳಲ್ಲಿ ದಾಖಲಾತಿಗಳನ್ನು ಪರಿಶೀಲನೆ ಮಾಡಿದ್ದಾರೆ.

ಮಳವಳ್ಳಿ ಮತ್ತು ಮದ್ದೂರು ತಾಲ್ಲೂಕಿನಲ್ಲಿ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ಮಾಡಿದ್ದು, ಮೈಸೂರಿನ ಕೊಳಗೇರಿ ಅಭಿವೃದ್ಧಿ ಮಂಡಳಿ ಇಂಜಿನಿಯರ್ ಬಾಲರಾಜು ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ಅವರ ಮನೆಗಳಲ್ಲಿ ಶೋಧ ನಡೆಸಿದರು.

ಇಂಜಿನಿಯರ್ ಬಾಲರಾಜು ಸ್ವಗ್ರಾಮ ಮಳವಳ್ಳಿ ತಾಲ್ಲೂಕಿನ ನಂಜೇಗೌಡನ ದೊಡ್ಡಿಯ ಫಾರ್ಮ್ ಹೌಸ್ ಮೇಲೆ ಲೋಕಾಯುಕ್ತ ಅಧಿಕಾರಿ ಸುಚಿತ್ ನೇತೃತ್ವದ ತಂಡ ದಾಳಿ ನಡೆಸಿ ದಾಖಲಾತಿ ಪರಿಶೀಲಿಸಿದರು.

ಮದ್ದೂರು ತಾಲ್ಲೂಕಿನ ತೈಲೂರು ಗ್ರಾಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯ ಇಂಜಿನಿಯರ್ ಶಶಿಕುಮಾರ್ ಅವರ ನಿವಾಸದ ಮೇಲೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳ ತಂಡ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!