Mysore
24
overcast clouds

Social Media

ಗುರುವಾರ, 27 ಆಗಸ್ಟ್ 2026
Light
Dark

5 ವರ್ಷ ಸಿಎಂ ಆಗಿ ಮುಂದುವರಿಯೋ ವಿಚಾರ ಗೊತ್ತಿರೋದು ಸಿದ್ದು ಮತ್ತು ಡಿಕೆಶಿಗೆ ಮಾತ್ರ : ಸಚಿವ ಡಾ.ಜಿ ಪರಮೇಶ್ವರ್

ಬೆಂಗಳೂರು : 5 ವರ್ಷ ಸಿಎಂ ಆಗಿ ಮುಂದುವರಿಯುವ ವಿಚಾರ ಗೊತ್ತಿರುವುದು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ಗೆ ಮಾತ್ರ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ಸಿಎಂ ಆಗಿ ನಾನೇ 5 ವರ್ಷ ಮುಂದುವೆಯುತ್ತೇಂಬ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಯಾರಿಗೂ ಗೊತ್ತಿಲ್ಲ ದೆಹಲಿಯಲ್ಲಿ ಸರ್ಕಾರ ರಚನೆಯಾದಾಗ ಏನೂ ತೀರ್ಮಾನ ಮಾಡಿದ್ದಾರೆ ಗೊತ್ತಿಲ್ಲ. ಅದು ಗೊತ್ತಿರೋದು ಸಿಎಂ ಹಾಗೂ ಡಿಸಿಎಂಗೆ ಮಾತ್ರ. ಅವರಿಗೆ ಮಾತ್ರ. ಆ ವಿಚಾರದಲ್ಲಿ ನಾವು ಹೇಳಿಕೆ ಕೊಡೋದು ಸರಿ ಕಾಣಿಸಲ್ಲ. ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿಗಳು ಬಂದು ಹೋಗಿದ್ದಾರೆ. ಬಹುಶಃ ಅವರಿಗೆ ಗೊತ್ತಿರುತ್ತೆ ಎಂದರು.

ಯಾವುದು ಸತ್ಯ ಯಾವುದು ಅಸತ್ಯ ಅಂತಾ ನಾನು ಜಡ್ಜ್ ಮಾಡೊಕ್ಕೆ ಆಗುತ್ತಾ?. ಅವರು ಹೇಳಿದ್ದಾರೆ ಏನೋ ಅರ್ಥ ಇರಬೇಕು. ನಾನು ವೈಯಕ್ತಿಕವಾಗಿ ಜಡ್ಜ್ಮೆಂಟ್ ಮಾಡೋಕ್ಕೆ ಆಗಲ್ಲ ಎಂದರು.

ಸಿಎಂ ಹೇಳಿಕೆ ರಾಜಕೀಯ ಬಣಕ್ಕೆ ಕಾರಣವಾಗುತ್ತಾ ಎಂಬ ವಿಚಾರದ ಕುರಿತು ಮಾತನಾಡಿ, ಏನೂ ಆಗಲ್ಲ ಅದರ ಬಗ್ಗೆ ಹೆಚ್ಚು ಚರ್ಚೆ ಮಾಡೋದು ಬೇಡ ಅನ್ನೊದು ನನ್ನ ಅನಿಸಿಕೆ. ನಾನಂತೂ ಅದರ ಬಗ್ಗೆ ಯಾವುದೇ ಪ್ರತಿಕ್ರಿಯೆ ಕೊಡುವುದಕ್ಕೆ ಹೋಗಲ್ಲ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!