Mysore
21
overcast clouds

Social Media

ಗುರುವಾರ, 06 ಆಗಸ್ಟ್ 2026
Light
Dark

ಬಿ ವೈ ವಿಜಯೇಂದ್ರಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು : ಮಾಜಿ ಮುಖ್ಯಮಂತ್ರ ಬಿ.ಎಸ್‌. ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ನೀಡಲಾಗಿದೆ.

ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌ ಅವಧಿ ಕೊನೆಗೊಂಡಿದ್ದು, ಲೋಕಸಭಾ ಚುನಾವಣೆಗು ಮುನ್ನಾ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಎಂಬ ಕುತೂಹಲವಿತ್ತು. ಬಹುಶಃ ಸಂಸದೆ ಶೋಭಾ ಕರಂದ್ಲಾಜೆಗೆ ರಾಜ್ಯಾಧ್ಯಕ್ಷ ಪಟ್ಟ ಎಂದು ನಂಬಲಾಗಿತ್ತು. ಆದರೆ, ಬಿ ವೈ ವಿಜಯೇಂದ್ರ ಆಯ್ಕೆ ಅಚ್ಚರಿ ತಂದಿದೆ.

ಲೋಕಸಭೆ ಚುನಾವಣೆಗೆ ಕೆಲವು ತಿಂಗಳು ಮುಂಚಿತವಾಗಿ ಆಗಿರುವ ಈ ಬದಲಾವಣೆ ಪಕ್ಷದ ಕಾರ್ಯಕರ್ತರಲ್ಲಿ ಸಂಚಲನ ಮೂಡಿಸಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!