Mysore
21
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಕೇರಳದಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ : ಕೊಡಗಿನಲ್ಲಿ ಹೈ ಅಲರ್ಟ್

ಕೊಡಗು : ಕೇರಳದ ವಯನಾಡಿನಲ್ಲಿ ಪೊಲೀಸರು ಹಾಗೂ ನಕ್ಸಲರ ನಡುವೆ ಗುಂಡಿನ ಚಕಮಕಿ ನಡೆದಿದೆ. ಹೀಗಾಗಿ ನಕ್ಸಲರು ಕರ್ನಾಟಕದ ಒಳಗಡೆ ನುಸುಳುವ ಸಾಧ್ಯತೆಗಳಿವೆ ಆದ್ದರಿಂದ ಕೊಡಗು ಜಿಲ್ಲೆಯ ಗಡಿ ಭಾಗದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ವಯನಾಡಿನಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ನಕ್ಸಲರು ತೊಂದರೆಗೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯದತ್ತ ಬರುವ ಶಂಕೆ ದಟ್ಟವಾಗಿದೆ. ಜಾಗ್ರತಾ ಕ್ರಮವಾಗಿ ಕೊಡಗಿನ ಗಡಿಭಾಗದಲ್ಲಿ ಭದ್ರತೆಗಾಗಿ ಹೆಚ್ಚಿನ ಪೋಲಿಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಬಿರುನಾಣಿ, ಕುಟ್ಟ, ಪರಕಟಕೇರಿ ಮತ್ತು ತೆರಲು ಭಾಗಗಳಲ್ಲಿ ನಕ್ಸಲರಿಗಾಗಿ ಕೂಂಬಿಂಗ್ ಶುರುವಾಗಿದೆ.

ಅನುಮಾನಾಸ್ಪದ ವ್ಯಕ್ತಿಗಳ ಓಡಾಟ ಕಂಡುಬಂದಲ್ಲಿ ಅವರನ್ನು ಕೂಡಲೇ ವಿಚಾರಣೆಗೊಳಪಡಿಸುವಂತೆ ಕೊಡಗು ಜಿಲ್ಲೆಯ ಎಸ್ ಪಿ ರಾಮರಾಜನ್ ಆದೇಶ ಹೊರಡಿಸಿದ್ದಾರೆ. ಗಡಿ ಭಾಗಗಳಲ್ಲಿ ಸಂಚರಿಸುವ ವಾಹನಗಳ ಮೇಲೆ ನಿಗಾ ಇರಿಸಲಾಗಿದ್ದು, ಚೆಕ್ ಪೋಸ್ಟ್ ಗಳಲ್ಲಿ ವಾಹನಗಳನ್ನು ತಪಾಸಣೆ ಮಾಡಿ ಮುಂದೆ ಬಿಡಲಾಗುತ್ತಿದೆ.

ಇನ್ನು ಗಡಿ ಭಾಗಕ್ಕೆ ಎಸ್ ಪಿ ರಾಮರಾಜನ್,ವಿರಾಜಪೇಟೆಯ ಡಿ ವೈ ಎಸ್ ಪಿ ಮೋಹನ್ ಕುಮಾರ್ ಹಾಗೂ ಇತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!