ಮೈಸೂರು: ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯಿಂದ ನೀಡುವ ಆಂದೋಲನ ದಿನಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ದಿವಂಗತ ರಾಜಶೇಖರ ಅವರ ೬ನೇ ವರ್ಷದ ಪುಣ್ಯಸ್ಮರಣಾರ್ಥ ಸೇವಾಭೂಷಣ ಪ್ರಶಸ್ತಿ ನೀಡಲಾಗುತ್ತಿದೆ.
ಇತಿಹಾಸ ತಜ್ಞ ಪ್ರೊ.ಪಿ.ವಿ.ನಂಜರಾಜ ಆರಸ್ ಹಾಗೂ ಹಿರಿಯ ಪತ್ರಕರ್ತ ಅಂಶಿ ಪ್ರಸನ್ನಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ನವೆಂಬರ್.೩೦ರಂದು ಕಲಾಮಂದಿರದ ಆವರಣದ ಕಿರುರಂಗಮಂದಿರದಲ್ಲಿ ನಡೆಯುವ ಕನ್ನಡ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಅಧ್ಯಕ್ಷ ಎಚ್.ಎಲ್.ಯಮುನಾ ತಿಳಿಸಿದ್ದಾರೆ.





