Mysore
20
overcast clouds

Social Media

ಶನಿವಾರ, 08 ಆಗಸ್ಟ್ 2026
Light
Dark

ಉತ್ತರಾಖಂಡ ಸುರಂಗದಿಂದ ಕಾರ್ಮಿಕರ ಸ್ಥಳಾಂತರ: ಕಾರ್ಮಿಕರ ಕಾರ್ಯಕ್ಕೆ ಪ್ರಧಾನಿ ಮೋದಿ ಶ್ಲಾಘನೆ

ಡೆಹ್ರಾಡೂನ್ : ಉತ್ತರಕಾಶಿ ಸಮೀಪ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯವು ಸಂಪೂರ್ಣ ಯಶಸ್ವಿಯಾಗಿದ್ದು, ಎಲ್ಲಾ 41 ಕಾರ್ಮಿಕರು ಸುರಂಗದಿಂದ ಹೊರಬಂದಿದ್ದಾರೆ. ಇವರೆಲ್ಲರನ್ನು ಕೂಡಲೇ ಆಂಬ್ಯುಲೆನ್ಸ್‌ ಮೂಲಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇತ್ತ ಕಾರ್ಮಿಕರು ಹೊರ ಬರುತ್ತಿದ್ದಂತೆ ಕುಟುಂಬಸ್ಥರು ತಮ್ಮವರ ಮುಖಗಳನ್ನು ಕಂಡು ಸಂತಸಪಟ್ಟರು. ತಂದಿದ್ದ ಸಿಹಿಯನ್ನು ಸೇನಾ ಸಿಬ್ಬಂದಿಗೆ ತಿನ್ನಿಸಿ ನಮ್ಮವರನ್ನು ಕಾಪಾಡಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿದರು.

ಉತ್ತರಕಾಶಿಯಲ್ಲಿ ನಮ್ಮ ಕಾರ್ಮಿಕ ಬಂಧುಗಳ ರಕ್ಷಣಾ ಕಾರ್ಯಾಚರಣೆಯ ಯಶಸ್ಸು ಎಲ್ಲರನ್ನೂ ಭಾವುಕರನ್ನಾಗಿಸುತ್ತಿದೆ. ಸುರಂಗದಲ್ಲಿ ಸಿಕ್ಕಿ ಬಿದ್ದಿದ್ದ ಸ್ನೇಹಿತರ ಧೈರ್ಯ ಮತ್ತು ತಾಳ್ಮೆ ಎಲ್ಲರಿಗೂ ಸ್ಪೂರ್ತಿದಾಯಕವಾಗಿದೆ.

ದೀರ್ಘಾವಧಿ ಸಮಯದ ತಮ್ಮ ತಮ್ಮ ಕುಟುಂಬದ ಪ್ರೀತಿಪಾತ್ರರನ್ನು ಭೇಟಿಯಾಗುತ್ತಾರೆ ಎಂಬುದು ಸಂತಸದ ವಿಷಯ. ಈ ಸವಾಲಿನ ಸಮಯದಲ್ಲಿ ಈ ಎಲ್ಲಾ ಕುಟುಂಬಗಳು ತೋರಿದ ತಾಳ್ಮೆ ಮತ್ತು ಧೈರ್ಯವನ್ನು ಮೆಚ್ಚುತ್ತೇವೆ.

ಈ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದ ಎಲ್ಲ ಜನರಿಗೆ ನಾನು ನಮಸ್ಕರಿಸುತ್ತೇನೆ. ಅವರ ಶೌರ್ಯ ಮತ್ತು ಸ್ಥೈರ್ಯ ನಮ್ಮ ಕಾರ್ಮಿಕ ಬಂಧುಗಳಿಗೆ ಹೊಸ ಬದುಕನ್ನು ನೀಡಿದೆ. ಈ ಕಾರ್ಯಾಚರಣೆಯಲ್ಲಿ ತೊಡಗಿರುವ ಪ್ರತಿಯೊಬ್ಬರ ಮಾನವೀಯತೆ ಮತ್ತು ಕೆಲಸ ಶ್ಲಾಘನೀಯ ಎಂದು ಪ್ರಧಾನಿ ಹೇಳಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಟ್ವೀಟ್‌ : “ಉತ್ತರಾಖಂಡದ ಸುರಂಗದಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರನ್ನು ರಕ್ಷಿಸಲಾಗಿದೆ ಎಂದು ತಿಳಿದು ನನಗೆ ಸಮಾಧಾನ, ಸಂತೋಷವಾಗಿದೆ. ರಕ್ಷಣಾ ಪ್ರಯತ್ನವು ಅಡೆತಡೆಗಳನ್ನು ಎದುರಿಸಿ 17 ದಿನಗಳ ಕಾಲ ಶ್ರಮಕ್ಕೆ ಈ ಕಾರ್ಯಚರಣೆ ಸಾಕ್ಷಿಯಾಗಿದೆ ” ಎಂದು ಹೇಳಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!