Mysore
22
overcast clouds

Social Media

ಶನಿವಾರ, 28 ಫೆಬ್ರವರಿ 2026
Light
Dark

ನಮ್ಮ ಜನಪರ ಯೋಜನೆಗಳು ಕ್ರಿಶ್ಚಿಯನ್‌ ಸಮುದಾಯದ ಬಡವರಿಗೆ ತಲುಪುತ್ತಿದೆ: ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿ ಸರ್ಕಾರದಿಂದ ದೇಶದಲ್ಲಿ ನಡೆಯುತ್ತಿರುವ ಜನಪರ ಅಭಿವೃದ್ಧಿಯ ಪ್ರಯೋಜನಗಳು ಕ್ರಿಶ್ಚಿಯನ್ ಸಮುದಾಯದ ಅನೇಕ ಜನರನ್ನು, ವಿಶೇಷವಾಗಿ ಬಡವರು ಮತ್ತು ವಂಚಿತರನ್ನು ತಲುಪುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಇಂದು ಕ್ರಿಸ್ಮಸ್‌ ಪ್ರಯುಕ್ತ ದೇಶದ ಜನರಿಗೆ ಶುಭಾಶಯ ತಿಳಿಸಿ, ಕಲ್ಯಾಣ್‌ ಮಾರ್ಗ್‌ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯೇಸು ಕ್ರಿಸ್ತನು ಸಹಾನುಭೂತಿ ಮತ್ತು ಸೇವೆಯ ಮೌಲ್ಯಗಳನ್ನು ಜೀವಿಸಿದರು. ಎಲ್ಲರಿಗೂ ನ್ಯಾಯವಿರುವ ಸಮಾಜವನ್ನು ರಚಿಸಲು ಅವರು ಶ್ರಮಿಸಿದ್ದಾರೆ ಎಂದು ಸ್ಮರಿಸಿದರು.

ಕೆಲವು ವರ್ಷಗಳ ಹಿಂದೆ ಪೋಪ್ ಅವರನ್ನು ಭೇಟಿಯಾಗಿದ್ದೆ, ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದೇವು. ನಾವು ‘ಸಬ್ಕಾ ಸಾಥ್, ಸಬ್ಕಾ ವಿಕಾಸ್’ ಮಂತ್ರವನ್ನು ನಂಬುತ್ತೇವೆ. ನಮ್ಮ ಸರ್ಕಾರದ ಅಭಿವೃದ್ಧಿಯ ಪ್ರಯೋಜನಗಳು ಹಿಂದುಳಿದವರಿಗೆ ಸಕಾಲದಲ್ಲಿ ಎಲ್ಲರಿಗೂ ತಲುಪುವಂತೆ ಮಾಡಿದ್ದೇವೆ. ಅದರಿಂದ ಯಾರು ವಂಚಿತರಾಗಬಾರದು ಎಂದು ಹೇಳಿದರು.

ಭಾರತ ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವತ್ತ ಸಾಗುತ್ತಿದೆ. 2047 ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿ ಮಾಡುವ ಗುರಿಯೊಂದಿಗೆ ಸರ್ಕಾರವು ತನ್ನ ಅಭಿವೃದ್ಧಿ ಕಾರ್ಯವನ್ನು ಮಾಡುತ್ತಿದೆ. ಈಗಾಗಲೇ ಅದಕ್ಕೆ ವೇಗವನ್ನು ಕೇಂದ್ರ ಸರ್ಕಾರ ನೀಡಿದೆ. ಹಾಗಾಗಿ ನಾವು ಮುಂದಿನ ಪೀಳಿಗೆಗೆ ಒಳ್ಳೆಯ ಮತ್ತು ಉತ್ತಮವಾದ ಉಡುಗೊರೆಯನ್ನು ನೀಡಬೇಕಿದೆ, ಅವರಿಗೊಂದು ಉತ್ತಮ ಹಾದಿಯನ್ನು ಮತ್ತು ಮಾರ್ಗದರ್ಶವನ್ನು ನೀಡಬೇಕಿದೆ ಇದುವೇ ಕ್ರಿಸ್ಮಸ್‌ಗೆ ಉಡುಗೊರೆ ನೀಡುವ ಕ್ರಮವಾಗಿದೆ ಎಂದು ಅವರು ತಿಳಿಸಿದರು.

https://x.com/narendramodi/status/1739240740163834316?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!