ಕೊರೊನಾದ ಹೊಸ ರೂಪಾಂತರಿ ಜೆಎನ್1 ಮತ್ತು ಇನ್ಫ್ಲುಯೆನ್ಜಾ ಸೇರಿದಂತೆ ಉಸಿರಾಟ ಸಮಸ್ಯೆಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನರು ರಕ್ಷಣಾತ್ಮಕ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಆರೋಗ್ಯ ಸಂಸ್ಥೆ ಸಲಹೆ ನೀಡಿದೆ.
ಕ್ರಿಸ್ಮಸ್ ಹಾಗೂ ಹೊಸ ವರ್ಷದ ಹೊತ್ತಲ್ಲೇ ಕೊರೊನಾ ವೈರಸ್ ಮತ್ತೆ ಭೀತಿ ಹುಟ್ಟಿಸಿದೆ. ಇದರ ಬೆನ್ನಲ್ಲೇ ಕೋವಿಡ್ ಪ್ರಕರಣಗಳ ಮೇಲೆ ಎಲ್ಲಾ ರಾಷ್ಟ್ರಗಳು ನಿಗಾ ಇಡಬೇಕು ಎಂದು ಡಬ್ಲ್ಯೂಎಚ್ಒ ಸೂಚನೆ ನೀಡಿದೆ.
ಕೇರಳದಲ್ಲಿ ಮೊದಲ ಪ್ರಕರಣ ವರದಿಯಾದ ನಂತರ, ಗೋವಾ, ಕರ್ನಾಟಕ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರಕರಣಗಳಲ್ಲಿ ತ್ವರಿತಗತಿಯಲ್ಲಿ ಏರಿಕೆ ಕಂಡುಬಂದಿದೆ. ಏತನ್ಮಧ್ಯೆ, ಕೇಂದ್ರ ಆರೋಗ್ಯ ಸಚಿವಾಲಯವು ರಾಜ್ಯ ಸರ್ಕಾರಗಳಿಗೆ ಎಚ್ಚರಿಕೆ ನೀಡುವಂತೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 106 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಇಂದು ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 344 ಕ್ಕೆ ಏರಿಕೆಯಾಗಿದ್ದು,. ಪಾಸಿಟಿವಿ ರೇಟ್ 7.35 % ಆಗಿದೆ.
ಹೋಂ ಐಸೋಲೇಷನ್ ಕಡ್ಡಾಯಗೊಳಿಸುವುದು, ಕ್ವಾರಂಟೈನ್ ಆದವರ ಮೇಲೆ ಹೆಚ್ಚು ನಿಗಾ ಇಡುವುದು, ಕೋವಿಡ್ ಟೆಸ್ಟ್ ಹೆಚ್ಚಳ, ನೆರೆ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಹೆಚ್ಚು ನಿಗಾ ಇಡುವುದು ಹಾಗೂ ಆಕ್ಸಿಜನ್, ವೆಂಟಿಲೇಟರ್ ಹಾಗೂ ವೈದ್ಯಕೀಯ ಉಪಕರಣಗಳನ್ನು ಸಿದ್ಧಪಡಿಸಿಕೊಳ್ಳಲು ಉದ್ದೇಶಿಸಿದೆ.





