ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರ್ಜಿ ಗ್ರಾಮದ ಬಳಿಯ ಬರಪೊಳೆಯಲ್ಲಿ ಮೂವರು ವಿದ್ಯಾರ್ಥಿಗಳು ಈಜಲು ಹೋಗಿ ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.
ಮಂಗೇಟಿರ ಬಿ ಆಕಾಶ್ ಬಿದ್ದಪ್ಪ, ಉಳುವಂಗಡ ಸುದೇಶ್ ಅಯ್ಯಪ್ಪ ಹಾಗೂ ರಶಿಕ್ ಕುಜ್ಞಗಂಡ ಜೆ ಮೃತ ವಿದ್ಯಾರ್ಥಿಗಳಾಗಿದ್ದು, ಮೂವರೂ ಸಹ ಪೊನ್ನಂಪೇಟೆಯ ಸಿಇಟಿ ಕಾಲೇಜಿನ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಎಂಬ ವಿಚಾರ ತಿಳಿದುಬಂದಿದೆ.