Mysore
24
light rain

Social Media

ಗುರುವಾರ, 21 ಮೇ 2026
Light
Dark

ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಮೊದಲ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಭಾಗಿ

ನವದೆಹಲಿ: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಮೊದಲ ಸಭೆ ಜರುಗಿತು. ಹಿರಿಯ ನಾಯಕ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಶಿ ತರೂರು ಮತ್ತಿತರ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

ಸಭೆ ಬಳಿಕ ಮಾತನಾಡಿದ ಪಿ. ಚಿದಂಬರಂ, ಇದು ಪ್ರಣಾಳಿಕೆ ಸಮಿತಿಯ ಮೊದಲ ಸಭೆ. ಮುಂದಿನ ವಾರ ಮತ್ತೆ ಭೇಟಿಯಾಗಲು ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಯಾವುದನ್ನೂ ನಿರ್ಧರಿಸಲಾಗಿಲ್ಲ. ಸಭೆಯಲ್ಲಿ ಪ್ರಾಥಮಿಕ ಆಲೋಚನೆಗಳು, ಚಿಂತನೆಗಳ ವಿನಿಮಯವಾಯಿತು ಹಾಗೂ ಪ್ರಣಾಳಿಕೆ ಕರಡನ್ನು ಹೇಗೆ ಸಿದ್ಧಪಡಿಸಬೇಕು ಎಂಬುದರ ಕುರಿತು ಚರ್ಚೆ ನಡೆಯಿತು ಎಂದು ತಿಳಿಸಿದರು.

ಕಾಂಗ್ರೆಸ್ ಸಂಸದ ಶಶಿ ತರೂರ್ ಮಾತನಾಡಿ, ಏನೂ ನಿರ್ಧರವಾಗಿಲ್ಲ. ನಾವು ಅತ್ಯುತ್ತಮ ಪ್ರಣಾಳಿಕೆ ರೂಪಿಸುವ ವಿಶ್ವಾಸವಿದೆ. ಜನರು ಮಾತನಾಡುವ ಪ್ರಣಾಳಿಕೆಯಾಗಬೇಕು ಎಂದು ಅವರು ಅಭಿಪ್ರಾಯಪಟ್ಟರು. ಮುಂದಿನ ಸಭೆ ಜನವರಿ 11 ರಂದು ವರ್ಚುಯಲ್ ನಲ್ಲಿ ನಡೆಯಲಿದೆ.

https://x.com/ANI/status/1742875216500682753?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!