Mysore
33
light rain

Social Media

ಸೋಮವಾರ, 14 ಸೆಪ್ಟೆಂಬರ್ 2026
Light
Dark

ಜನವರಿ ೧೭ ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ಹಿಟ್‌ ಅಂಡ್‌ ರನ್‌ ಕೇಸ್‌ನಲ್ಲಿ ಹತ್ತು ವರ್ಷ ಜೈಲು ಹಾಗೂ ಏಳು ಲಕ್ಷ ರೂ. ದಂಡ ವಿಧಿಸುವ ಕೇಂದ್ರ ಸರ್ಕಾರದ ಕನೂನನ್ನು ವಿರೋಧಿಸಿ ಜನವರಿ ೧೭ ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ನಡೆಸಲಾಗುವುದು ಎಂದು ಲಾರಿ ಮಾಲೀಕರ ಸಂಘ ತಿಳಿಸಿದೆ.

ಬೆಂಗಳೂರಿನಲ್ಲಿಂದು ಲಾರಿ ಸಂಘದ ಅಧ್ಯಕ್ಷ ನವೀನ್‌ ರೆಡ್ಡಿ ಮಾತನಾಡಿ, ಎಲ್ಲೇ, ಯಾವುದೇ ಅಪಘಾತವಾದರೂ ಮೊದಲು ಲಾರಿ ಚಾಲಕರ ಮೇಲೆಯೇ ದಾಳಿಗಳಾಗುತ್ತವೆ. ಲಾರಿಯ ಹಿಂಬದಿ ಚಕ್ರಕ್ಕೆ ಬೈಕ್‌ ಸಿಲುಕಿದಾಗ ಲಾರಿಯನ್ನು ತಕ್ಷಣ ನಿಲ್ಲಿಸುವುದು ಸುಲಭದ ಕೆಲಸವಲ್ಲ. ಅಂತಹ ಸ್ಥಳದಲ್ಲಿ ಲಾರಿ ನಿಲ್ಲಿಸಿದರೇ ಚಾಲಕನ ಮೇಲೆ ವಿನಾಕಾರಣ ಹಲ್ಲೆಗಳು ನಡೆಯುತ್ತವೆ. ಅಂತಹ ಸಮಯದಲ್ಲಿ ಆತ್ಮ ರಕ್ಷಣೆಗಾಗಿ ಸ್ಥಳೀಯ ಪೊಲೀಸ್‌ ಠಾಣೆಗೆ ಹೋಗುತ್ತಾರೆ. ಇಂತಹ ಘಟನೆಗಳನ್ನು ಹಿಟ್‌ ಅಂಡ್‌ ರನ್‌ ಎನ್ನುವುದು ಎಷ್ಟು ಸರಿ?. ಕೇಂದ್ರ ಸರ್ಕಾರ ಕೂಡಲೇ ಈ ಕಾನೂನನ್ನು ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರದ ಈ ಹೊಸ ನಿಯಮದಿಂದಾಗಿ ಟ್ರಕ್ ಚಾಲಕರು ಅನಗತ್ಯ ಕಿರುಕುಳವನ್ನು ಎದುರಿಸಬೇಕಾಗುತ್ತದೆ ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಕಾಂಗ್ರೆಸ್ ಕೂಡ ಹೇಳಿದ್ದು, ಕೇಂದ್ರ ಈ ಕಾನೂನನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದೆ. ಜೊತೆಗೆ ಕರ್ನಾಟಕ ಹೊರತುಪಡಿಸಿ ಮಹಾರಾಷ್ಟ್ರ ಮಾತ್ರವಲ್ಲದೆ ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನಗಳಲ್ಲಿಯೂ ಲಾರಿ ಮುಷ್ಕರ ನಡೆಯಲಿದೆ ಎಂದು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!