Mysore
25
overcast clouds

Social Media

ಶುಕ್ರವಾರ, 12 ಜೂನ್ 2026
Light
Dark

ಸಕ್ಕರೆ ನಾಡು ಮಂಡ್ಯದಲ್ಲಿ ಚಿರತೆ ಆಯ್ತು, ಈಗ ಹುಲಿ ಹಾವಳಿ

ಮಂಡ್ಯ ಜಿಲ್ಲೆಯ ಜನತೆ ಚಿರತೆ ಹಾವಳಿಯಿಂದ ಈಗಾಗಲೇ ಬೇಸತ್ತಿದ್ದು ಇದೀಗ ಜಿಲ್ಲೆಯಲ್ಲಿ ಹುಲಿ ಕಾಣಿಸಿಕೊಂಡಿರುವುದು ಜನರಲ್ಲಿ ಇನ್ನಷ್ಟು ಆತಂಕವನ್ನು ಮೂಡಿಸಿದೆ. ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದ ಜಮೀನೊಂದರಲ್ಲಿ ಹುಲಿ ಕಾಣಿಸಿಕೊಂಡಿದ್ದು, ಹುಲಿ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ( ಜನವರಿ 15 ) ಸಂಜೆ 4 ಗಂಟೆ ಸಮಯಕ್ಕೆ ಜಮೀನೊಂದರಲ್ಲಿ ಹುಲಿ ಓಡಾಡುತ್ತಿರುವ ಸಿಸಿಟಿವಿ ದೃಶ್ಯ ಲಭ್ಯವಾಗಿದೆ.

ಇನ್ನು ಹುಲಿ ರಸ್ತೆ ದಾಟುತ್ತಿರುವ ವಿಡಿಯೊವನ್ನು ಸ್ಥಳೀಯರು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೊಗಳನ್ನು ಕಂಡ ಸ್ಥಳೀಯರು ಆತಂಕಕ್ಕೊಳಗಾಗಿದ್ದು, ಹುಲಿ ಸೆರೆ ಹಿಡಿಯಬೇಕೆಂದು ಅರಣ್ಯ ಇಲಾಖೆಗೆ ಮನವಿ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿರುವ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!