ಹಾಸನದ ಸಕಲೇಶಪುರ ಪೊಲೀಸ್ ವಸತಿಗೃಹದಲ್ಲಿ ಪೊಲೀಸ್ ಪೇದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 112 ಪೊಲೀಸ್ ವಾಹನದ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ 39 ವರ್ಷದ ಸೋಮಶೇಖರ್ ಮೃತಪಟ್ಟ ಪೇದೆ.
ಇನ್ನು ಮೃತ ಸೋಮಶೇಖರ್ ಅವರ ಪತ್ನಿ ಈ ಹಿಂದೆ ತನ್ನ ಪತಿ ವಿರುದ್ಧ ಕಿರುಕುಳದ ಆರೋಪ ಮಾಡಿ ಡಿವೈಎಸ್ಪಿಗೆ ದೂರು ನೀಡಿದ್ದರು. ಇದರಿಂದಾಗಿ ಮನನೊಂದ ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಸಕಲೇಶಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಗಮನಿಸಿ: ಆತ್ಮಹತ್ಯೆ ಮಾಡಿಕೊಳ್ಳುವುದು ಎಲ್ಲಕ್ಕೂ ಪರಿಹಾರವಲ್ಲ. ಆತ್ಮಹತ್ಯೆಯ ಯೋಚನೆಗಳು ಬಂದಾಗ ಸನಿಹದ ಸ್ನೇಹಿತರ ಜತೆ ನಿಮ್ಮ ಸಮಸ್ಯೆಗಳ ಬಗ್ಗೆ ಚರ್ಚಿಸಿ ಬಗೆಹರಿಸಿಕೊಳ್ಳಿ. ಇಲ್ಲವಾದರೆ ತಪ್ಪದೇ ಈ ಸಹಾಯವಾಣಿಗೆ ಕರೆ ಮಾಡಿ: 9152987821