Mysore
21
broken clouds

Social Media

ಬುಧವಾರ, 24 ಜೂನ್ 2026
Light
Dark

ಮಮತ ಬ್ಯಾನರ್ಜಿ ಜೊತೆ ಮಾತನಾಡಿದ ಎಐಸಿಸಿ ಅಧ್ಯಕ್ಷರು !

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ (ಟಿ ಎಂ ಸಿ) ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ ದಿನಗಳ ಬಳಿಕ, ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ.

”ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮಮತಾ ಬ್ಯಾನರ್ಜಿಯೊಂದಿಗೆ ಮಾತನಾಡಿದ್ದಾರೆ. ಮುಂದುವರಿಯುವುದು ಹೇಗೆ ಎಂಬ ಬಗ್ಗೆ ನಾವು ನಿರ್ಧಾರವೊಂದಕ್ಕೆ ಬರುತ್ತೇವೆ” ಎಂದು ಕಾಂಗ್ರೆಸ್ ಪಕ್ಷದ ಸಂಪರ್ಕ ಮುಖ್ಯಸ್ಥ ಜೈರಾಮ್ ರಮೇಶ್ ಹೇಳಿದ್ದಾರೆ.

ಲೋಕಸಭಾ ಚುನಾವಣೆಯನ್ನು ತನ್ನ ಪಕ್ಷವು ಏಕಾಂಗಿಯಾಗಿ ಎದುರಿಸುವುದು ಎಂಬುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಘೋಷಿಸಿದ ಒಂದು ದಿನದ ಬಳಿಕ, ಬಿಕ್ಕಟ್ಟನ್ನು ತಿಳಿಗೊಳಿಸಲು ಖರ್ಗೆ ಗುರುವಾರ ಅವರೊಂದಿಗೆ ಮಾತನಾಡಿದ್ದಾರೆ ಎಂದು ಜೈರಾಮ್ ರಮೇಶ್ ತಿಳಿಸಿದರು.

ರಾಹುಲ್ ಗಾಂಧಿ ನೇತೃತ್ವದ ‘ಭಾರತ್ ಜೋಡೊ ನ್ಯಾಯ ಯಾತ್ರೆ’ಯು ಬಿಹಾರದಲ್ಲಿ ಹಾದು ಹೋಗುವಾಗ ಜನವರಿ 30ರಂದು ಅದರಲ್ಲಿ ಭಾಗವಹಿಸುವಂತೆ ಲಾಲು ಪ್ರಸಾದ್ ಯಾದವ್ ಮತ್ತು ನಿತೀಶ್ ಕುಮಾರ್ ಗೆ ಖರ್ಗೆ ಮನವಿಯನ್ನೂ ಮಾಡಿದ್ದಾರೆ ಎಂದು ಅವರು ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!