Mysore
23
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ರಾಮಮಂದಿರ ನಿರ್ಮಾಣಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು: ಯತೀಂದ್ರ

ಚಾಮರಾಜನಗರ : ರಾಮಮಂದಿರ ಕಟ್ಟುವುದಕ್ಕಿಂತ ರಾಮರಾಜ್ಯ ನಿರ್ಮಾಣ ಆಗಬೇಕು ಎಂದು ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಶನಿವಾರ ಹೇಳಿಕೆ ನೀಡಿದ್ದಾರೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿಂದು ನಡೆದ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಯಾವ ಭರವಸೆ ಈಡೇರಿಸಿಲ್ಲ. ಆದರೂ ಮೋದಿ ಗ್ಯಾರಂಟಿ ಎಂದು ಹೇಳುತ್ತಿದ್ದಾರೆ, ರಾಮಮಂದಿರ ಮಾಡುವುದು ಗ್ಯಾರಂಟೀನಾ? ಎಂದು ಪ್ರಶ್ನಿಸಿರುವ ಅವರು, ರಾಮಮಂದಿರ ನಿರ್ಮಾಣ ಮಾಡುವುದಕ್ಕಿಂತ ರಾಮರಾಜ್ಯವನ್ನು ನಿರ್ಮಾಣ ಮಾಡಬೇಕು ಎಂದು ಹೇಳಿದ್ದಾರೆ.

ಸಮಾಜದಲ್ಲಿ ಸಮಾನತೆ ಆದಾಗ, ಹಸಿವು ಮುಕ್ತ ಹಾಗೂ ಯುವಕರಿಗೆ ಸರಿಯಾದ ಶಿಕ್ಷಣ, ಉದ್ಯೋಗ ಜೊತೆಗೆ ಮಹಿಳೆಯರಿಗೆ ರಕ್ಷಣೆ ಸಿಕ್ಕಾಗ ಮಾತ್ರ ರಾಮರಾಜ್ಯ ಆಗುತ್ತದೆ. ದೇವರು ಸಾಕ್ಷಾತ್ಕಾರ ಆಗಬೇಕಾದರೆ ದೊಡ್ಡ ದೊಡ್ಡ ಭವ್ಯವಾದ ದೇವಸ್ಥಾನ ಕಟ್ಟಬೇಕಿಲ್ಲ. ಸಾವಿರಾರು ವರ್ಷಗಳಿಂದ ಹಿಂದೂ ಧರ್ಮ ಇದೆ, ನೂರಾರು ದೇವಸ್ಥಾನಗಳಿವೆ. ಆದ್ರೆ, ಹಿಂದೂ ಧರ್ಮದಲ್ಲಿನ ಜಾತಿ ವ್ಯವಸ್ಥೆ ಮಾತ್ರ ತೊಲಗಿಲ್ಲ ಎಂದು ಕಿಡಿಕಾರಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!