Mysore
26
overcast clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ರಾಷ್ಟ್ರಧ್ವಜ ಹಾರಿಸುವ ಧ್ವಜಸ್ತಂಬದಲ್ಲಿ ಬೇರೆ ಧ್ವಜ ಹಾರಿಸುವಂತಿಲ್ಲ : ಸಿಎಂ ಸಿದ್ದು!

ಚಿತ್ರದುರ್ಗ : ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಧ್ವಜ ತೆರವು ಮಾಡಿರುವ ಸಂಬಂಧ ವಿರೋಧಪಕ್ಷಗಳು ರಾಜಕೀಯ ಮಾಡುತ್ತಿವೆ.

ಭಾರತ ದೇಶದ ಧ್ವಜ ಹಾರಿಸುವುದು ಬಿಟ್ಟು ಭಗವಾಧ್ವಜ ಹಾರಿಸಿದ್ದು ಸರಿಯಲ್ಲ. ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ನಿಯಮಾನುಸಾರ ಅವಕಾಶ ಇಲ್ಲ.ಲೋಕಸಭಾ ಚುನಾವಣೆಯಲ್ಲಿ 15- 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ.

ಬಿಜೆಪಿಯವರಂತೆ 28 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಸುಳ್ಳು ಹೇಳುವುದಿಲ್ಲ. ಚುನಾವಣಾ ಸಮೀಕ್ಷೆಯನ್ನು ಮಾಡಿಸಿದ್ದು, ಅದರಂತೆ ಹೇಳುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!