ಉತ್ತರಪ್ರದೇಶ : ಅಯೋಧ್ಯೆಯ ರಾಮಮಂದಿರವನ್ನು ಧ್ವಂಸಗೊಳಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿದ್ದ ಮೂವರು ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಬಿಜ್ನೋರ್ ಜಿಲ್ಲೆಯ ಇರ್ಷಾದ್, ಅಜ್ಮಲ್ ಮತ್ತು ಅಲಿ ಬಂಧಿತ ಆರೋಪಿಗಳು.
ಸಾಮಾಜಿಕ ಜಾಲತಾಣಗಳಲ್ಲಿ ಹಲವು ಫೇಕ್ ಅಕೌಂಟ್ ಗಳನ್ನು ಸೃಷ್ಟಿಸಿಕೊಂಡಿದ್ದ ಈ ಮೂವರೂ ಶ್ರೀರಾಮ ಹಾಗೂ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್ ಗಳನ್ನು ಪ್ರಕಟಿಸುತಿದ್ದರು.
ಈ ಮೂಲಕ ಸಾಮರಸ್ಯಕ್ಕೆ ಧಕ್ಕೆ ತರುವುದಲ್ಲದೇ ಸಮಾಜದ ಶಾಂತಿಯನ್ನು ಕದಡಲು ಯತ್ನಿಸುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ. ಮೂವರ ವಿರುದ್ದ ಸೈಬರ್ ಕ್ರೈಂ ಕಾಯಿದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.