Mysore
24
overcast clouds

Social Media

ಬುಧವಾರ, 25 ಫೆಬ್ರವರಿ 2026
Light
Dark

ಜ್ಞಾನವಾಪಿಯಲ್ಲಿ ದೇವರ ಪೂಜೆ ವಿರೋಧಿಸಿ ಮುಸಲ್ಮಾನರು ಅಂಗಡಿ ಮುಂಗಟ್ಟುಗಳು ಬಂದ್‌ !

ವಾರಣಾಸಿ : ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುವ ಪೂಜೆಯನ್ನು ವಿರೋಧಿಸಿ ಶುಕ್ರವಾರ ತಮ್ಮ ಅಂಗಡಿಗಳನ್ನು ಮುಚ್ಚುವಂತೆ ಜ್ಞಾನವಾಪಿ ಮಸೀದಿಯನ್ನು ನಿರ್ವಹಿಸುವ ಅಂಜುಮನ್ ಇಂಟೆಝಾಮಿಯಾ ಮಸೀದಿ ಸಮಿತಿ (ಎಐಎಂಸಿ) ಮುಸ್ಲಿಂ ಸಮುದಾಯದ ಜನರಿಗೆ ಮನವಿ ಮಾಡಿದೆ.

ಮುಸ್ಲಿಂ ಸಮುದಾಯದ ಪ್ರಮುಖ ಸದಸ್ಯರು ಗುರುವಾರ ಧರ್ಮಗುರುಗಳೊಂದಿಗೆ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಭೆಯ ಅಧ್ಯಕ್ಷತೆ ವಹಿಸಿದ್ದ ಶಹರ್-ಎ-ಮುಫ್ತಿ ಮತ್ತು ಎಐಎಂಸಿ ಪ್ರಧಾನ ಕಾರ್ಯದರ್ಶಿ ಮೌಲಾನಾ ಅಬ್ದುಲ್ ಬಟಿನ್ ನೊಮಾನಿ ಅವರು, ಶುಕ್ರವಾರ, ಎಲ್ಲಾ ಅಂಗಡಿಗಳು ಮತ್ತು ವ್ಯವಹಾರಗಳನ್ನು ಶಾಂತಿಯುತ ರೀತಿಯಲ್ಲಿ ಮುಚ್ಚಲಾಗುವುದು ಮತ್ತು ಸಮುದಾಯದ ಜನರು ಆಯಾ ನಗರಗಳು ಮತ್ತು ಪ್ರದೇಶಗಳಲ್ಲಿ ಉಳಿದುಕೊಂಡು ಪ್ರಾರ್ಥನೆಯಲ್ಲಿ ನಿರತರಾಗಿರಬೇಕು ಎಂದು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಮಹಿಳೆಯರು ತಮ್ಮ ಮನೆಗಳಲ್ಲಿಯೇ ಇದ್ದು ಪ್ರಾರ್ಥನೆ ಸಲ್ಲಿಸಬೇಕು. ಮದುವೆ ಮತ್ತು ಇತರ ಆಚರಣೆಗಳನ್ನು ಸರಳವಾಗಿ ಆಯೋಜಿಸಬೇಕು ಎಂದು ಶಹರ್-ಎ-ಮುಫ್ತಿ ಅಬ್ದುಲ್ ಬಟಿನ್ ನೊಮಾನಿ ಹೊರಡಿಸಿದ ಮನವಿಯಲ್ಲಿ ತಿಳಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!