Mysore
18
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ಮಂಡ್ಯ: ಭೀಕರ ಕಾರು ಅಪಘಾತ; ಮೂವರು ಸ್ಥಳದಲ್ಲೇ ಸಾವು

ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಅಕ್ಕಿಹೆಬ್ಬಾಳು ಸೇತುವೆ ಬಳಿ ತಡರಾತ್ರಿ ನಡೆದಿದೆ.

ಕೆಆರ್‌ ಪೇಟೆಯಿಂದ ಅಕ್ಕಿಹೆಬ್ಬಾಳುವಿಗೆ ತೆರಳುವಾಗ ಈ ಘಟನೆ ನಡೆದಿದ್ದು, ಕೆ.ಆರ್.‌ ಪೇಟೆ ನಿವಾಸಿಗಳಾದ ಅನಿಕೇತನ್‌ ( 30 ), ಪವನ್ ಶೆಟ್ಟಿ ( 32 ) ಹಾಗೂ ಚಿರಂಜೀವಿ ( 32 ) ಮೃತಪಟ್ಟಿದ್ದಾರೆ. ಇನ್ನು ಸಾಗರ್‌ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!