Mysore
28
overcast clouds

Social Media

ಶನಿವಾರ, 22 ಆಗಸ್ಟ್ 2026
Light
Dark

ಪಾಕ್‌ ಪರ ಘೋಷಣೆ ಆರೋಪ; ಸಿದ್ದರಾಮಯ್ಯ ಹೇಳಿದ್ದೇನು?

ಬೆಂಗಳೂರು: ನಿನ್ನೆ ( ಫೆಬ್ರವರಿ 27 ) ವಿಧಾನಸೌಧದಲ್ಲಿ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ವಿಧಾನಸಭೆ ಸದಸ್ಯರು ಮತದಾನ ಮಾಡಿದರು. ಈ ಪೈಕಿ ಓರ್ವ ಬಿಜೆಪಿ ಅಭ್ಯರ್ಥಿ ಹಾಗೂ ಮೂವರು ಕಾಂಗ್ರೆಸ್‌ ಅಭ್ಯರ್ಥಿಗಳು ಜಯ ಸಾಧಿಸಿದರು. ಇನ್ನು ಫಲಿತಾಂಶ ಹೊರಬಿದ್ದ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ನಾಸಿರ್‌ ಹುಸೇನ್‌ ಸಂಭ್ರಮಾಚರಣೆ ವೇಳೆ ಬೆಂಬಲಿಗರಲ್ಲಿ ಕೆಲವರು ಪಾಕಿಸ್ತಾನ ಪರ ಘೋಷಣೆ ಕೂಗಿದರು ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ವಿಡಿಯೊ ಸಹ ಹರಿದಾಡುತ್ತಿದೆ. ಇನ್ನು ಕಾಂಗ್ರೆಸ್‌ನ ಕೆಲವರು ಇದರಲ್ಲಿ ನಾಸಿರ್‌ ಹುಸೇನ್‌ ಜಿಂದಾಬಾದ್‌ ಹಾಗೂ ಕಾಂಗ್ರೆಸ್‌ ಜಿಂದಾಬಾದ್‌ ಎಂದು ಕೂಗುತ್ತಿದ್ದಾರೆಯೋ ಹೊರತು ಪಾಕಿಸ್ತಾನ ಜಿಂದಾಬಾದ್‌ ಎಂದಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಸ್ವತಃ ನಾಸಿರ್ ಹುಸೇನ್‌ ಸಹ ಈ ಕುರಿತು ಮಾತನಾಡಿ ಇದೇ ರೀತಿಯ ಹೇಳಿಕೆಯನ್ನು ನೀಡಿದ್ದಾರೆ. ಅಲ್ಲದೇ ಒಂದುವೇಳೆ ಯಾರಾದರೂ ಘೋಷಣೆ ಕೂಗಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದೂ ಸಹ ಹೇಳಿದ್ದಾರೆ.

ಸದ್ಯ ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಮಾತನಾಡಿದ್ದು ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ದೇಶ ದ್ರೋಹಿಗಳನ್ನು ಮಟ್ಟ ಹಾಕಬೇಕಿದೆ ಎಂದು ತಿಳಿಸಿದರು. ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಯೇ ಎಂಬುದು ಮೊದಲು ಸಾಬೀತಾಗಬೇಕಿದೆ. ಅದಕ್ಕಾಗಿ ವಿಡಿಯೊ ತುಣುಕುಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇನೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!