Mysore
26
overcast clouds

Social Media

ಗುರುವಾರ, 11 ಜೂನ್ 2026
Light
Dark

ಮೈಸೂರು: ರೈಲಿಗೆ ಸಿಲುಕಿ ಬಿಹಾರ ಮೂಲದ ವ್ಯಕ್ತಿ ಸಾವು

ಮೈಸೂರು: ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಅಜಾಗರೂಕತೆಯಿಂದ ರೈಲ್ವೆ ಹಳಿ ದಾಟುತಿದ್ದ ವ್ಯಕ್ತಿಗೆ ರೈಲು ಗುದಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. ಬಿಹಾರ ಮೂಲದ ಮನು ಕುಮಾರ್ (26) ಮೃತಪಟ್ಟ ವ್ಯಕ್ತಿ. ಮನುಕುಮಾರ್ ದೊಡ್ಡ ಕವಲಂದೆಯಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ.

ಬೆಳಿಗ್ಗೆ ಹೆಂಡತಿ ಜೊತೆಗೆ ಮನುಕುಮಾರ್ ವಿಡಿಯೋ ಕಾಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭದಲ್ಲಿ ಚಾಮರಾಜನಗರದಿಂದ ಮೈಸೂರಿಗೆ ತೆರಳುತ್ತಿದ್ದ ರೈಲು ಡಿಕ್ಕಿಯಾಗಿ ಸಾವನ್ನಪ್ಪಿದ್ದಾನೆ. ಈ ಕುರಿತು ನಂಜನಗೂಡು ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!