Mysore
29
light rain

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಡಮ್ಮಿ ಕ್ಯಾಂಡಿಡೇಟ್‌ ಹಾಕಿದೆ: ಈಶ್ವರಪ್ಪ ವ್ಯಂಗ್ಯ!

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಡಮ್ಮಿ ಕ್ಯಾಂಡಿಡೇಟ್‌ನ್ನು ಸ್ಪರ್ಧೆಗೆ ನಿಲ್ಲಿಸಿದೆ. ಹೀಗಂತ ನಾನು ಹೇಳುತ್ತಿಲ್ಲ. ಜನರು ಹೇಳುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ದೊಡ್ಮನೆ ಹಿರಿ ಸೊಸೆ ಗೀತಾ ಶಿವರಾಜ್‌ ಕುಮಾರ್‌ ಅವರನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ಕಾಂಗ್ರೆಸ್‌ ಡಮ್ಮಿ ಕ್ಯಾಂಡಿಡೇಟ್‌ನ್ನು ಹಾಕಿಸಿಕೊಂಡು ಬಂದಿದ್ದಾರೆ ಎಂದು ಹೇಳುವ ಮೂಲಕ ವಿವಾದಕ್ಕೆ ದಾರಿ ಮಾಡಿಕೊಟ್ಟಿದ್ದಾರೆ.

ನಾನು ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧಾರ ಮಾಡಿದ್ದೇನೆ. ಇನ್ನು ಆ ಬ್ರಹ್ಮ ಬಂದು ಹೇಳಿದರು ಸ್ಪರ್ಧೇ ಕಣದಿಂದ ಹಿಂದೆ ಸರಿಯುವ ಮಾತಿಲ್ಲ ಎಂದಿದ್ದಾರೆ.

ಮುಂದುವರಿದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರವಾಸ ಕೂಡ ಮಾಡಿರುವೆ. ಎಲ್ಲಾ ಕಡೆ ಅಭೂತಪೂರ್ವ ಸ್ವಾಗತ ಸಿಗುತ್ತಿದೆ. ಅದೃಶ್ಯದ ಮತಗಳೆಲ್ಲ ನನಗೆ ಖಂಡಿತ ಸಿಗುತ್ತವೆ. ವಿಶೇಷವಾಗಿ ಜೆಡಿಎಸ್, ಕಾಂಗ್ರೆಸ್, ರಾಷ್ಟ್ರಭಕ್ತ ಮುಸ್ಲಿಂರ ಮತಗಳು ಕೂಡ ನನಗೆ ಸಿಗುತ್ತವೆ. ನಾನು ಗೆಲ್ಲುವ ಮೂಲಕ ಮೋದಿ ಪ್ರಧಾನಿಯಾಗಲಲು ನರೆವಾಗುತ್ತೇನೆ ಎಂದು ಹೇಳಿದ್ದಾರೆ.

Tags: