ಶಿವಮೊಗ್ಗ: ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಂಡಾಯ ಅಭ್ಯರ್ಥಿ ಕೆಎಸ್ ಈಶ್ವರಪ್ಪ ವಿರುದ್ಧ ಜಿಲ್ಲೆಯ ಶಿಕಾರಿಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.
ಶಿಕಾರಿಪುರದಲ್ಲಿ ಮಾರ್ಚ್ 24ರಂದು ನಿಯಮ ಮೀರಿ ಬೈಕ್ ರ್ಯಾಲಿ ಮಾಡಲಾಗಿತ್ತು. 10 ಬೈಕ್, ಒಂದು ಜೀಪ್ಗೆ ಮಾತ್ರ ಅನುಮತಿ ಪಡೆಯಲಾಗಿತ್ತು. ಆದರೆ ರ್ಯಾಲಿಯಲ್ಲಿ 50ಕ್ಕೂ ಹೆಚ್ಚು ಬೈಕ್ಗಳು, 4 ಕಾರು ಭಾಗಿ ಹಿನ್ನೆಲೆ ದೂರು ದಾಖಲು ಮಾಡಲಾಗಿದೆ.