Mysore
24
scattered clouds
Light
Dark

ಹೈಕೋರ್ಟ್‌ ಹಾಲ್‌ನಲ್ಲೇ ನ್ಯಾಯಾಮೂರ್ತಿಗಳ ಮುಂದೆ ಕತ್ತು ಕುಯ್ದುಕೊಂಡ ವ್ಯಕ್ತಿ!

ಬೆಂಗಳೂರು : ರಾಜ್ಯ ಹೈಕೋರ್ಟ್ ಹಾಲ್‌ನಲ್ಲಿ ವ್ಯಕ್ತಿ ಒಬ್ಬ ವಿಚಾರಣೆ ವೇಳೆ ಚಾಕುವಿನಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಎಚ್. ಪಿ.ಪ್ರಭಾಕರ ಶಾಸ್ತ್ರಿ ಅವರಿದ್ದ ವಿಭಾಗೀಯ ನ್ಯಾಯಪೀಠ ಎಂದಿನಂತೆ ದೈನಂದಿನ ಪ್ರಕರಣಗಳ ವಿಚಾರಣೆ ನಡೆಸುತ್ತಿತ್ತು.

ಮಧ್ಯಾಹ್ನ 1.15ರ ಸಮಯದಲ್ಲಿ ಕ್ರಮ ಸಂಖ್ಯೆ 26 ರ ಪ್ರಕರಣವನ್ನು ಕೋರ್ಟ್ ಆಫೀಸರ್ ಕೂಗುತ್ತಿದ್ದಂತೆಯೇ ಮಧ್ಯ ವಯಸ್ಸಿನ ವ್ಯಕ್ತಿಯೊಬ್ಬರು ಒಂದಷ್ಟು ಫೈಲುಗಳೊಂದಿಗೆ ನ್ಯಾಯಪೀಠದ ಮುಂದೆ ಬಂದು ನಿಂತರು.

ನೋಡ ನೋಡುತ್ತಿದ್ದಂತೆಯೇ ಆ ವ್ಯಕ್ತಿ ತಾವು ತಂದಿದ್ದ ಹರಿತವಾದ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡಿದ್ದಾರೆ.

ತಕ್ಷಣ ಮುಖ್ಯ ನ್ಯಾಯಮೂರ್ತಿಗಳು ಪೊಲೀಸರನ್ನು ಕರೆದು ಆ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸುವಂತೆ ಸೂಚಿಸಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಆ ವ್ಯಕ್ತಿಯನ್ನು ಹೊರಗೆ ಕರೆದುಕೊಂಡು ಹೋಗಿದ್ದಾರೆ.