Mysore
23
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ನಟ ದರ್ಶನ್‌ ಎಡಗೈಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ ಗಾಯಗೊಂಡಿದ್ದರು. ಡೇವಿಲ್‌ ಸಿನಿಮಾ ಚಿತ್ರೀಕರಣದ ವೇಳೆ ಕೈಗೆ ಪೆಟ್ಟಾಗಿತ್ತು. ಎಡಗೈ ನೋವಿನ ನಡುವೆಯೇ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು. ಇದೀಗ ನಟ ದರ್ಶನ್ ಕೈಗೆ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ಆಗಿದ್ದು ಚೇತರಿಸಿಕೊಳ್ಳುತ್ತಿದ್ದಾರೆ.

ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಅವರ ಕೈಗೆ ಸರ್ಜರಿ ಮಾಡಲಾಗಿದ್ದು. ಸದ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಶಸ್ತ್ರ ಚಿಕಿತ್ಸೆಯ ಬಳಿಕ ದರ್ಶನ್ ತಮ್ಮ ಅಭಿಮಾನಿ ಜೊತೆಗೆ ಕ್ಲಿಕ್ಕಿಸಿಕೊಂಡ ಫೋಟೊ ವೈರಲ್ ಆಗುತ್ತಿದೆ. ಫೋಟೋ ನೋಡಿದ ಫ್ಯಾನ್ಸ್, ಈಗ ಆದಷ್ಟು ಬೇಗ ಗುಣಮುಖರಾಗಿ ಬಾಸ್ ಎಂದು ಪ್ರಾರ್ಥಿನೆ ಮಾಡುತ್ತಿದ್ದಾರೆ.

ಮಿಲನಾ ಪ್ರಕಾಶ್ ನಿರ್ದೇಶನದ ‘ಡೆವಿಲ್’ ಸಿನಿಮಾ ಬಹಳಷ್ಟು ನಿರೀಕ್ಷೆ ಮೂಡಿಸಿದೆ. ಈಗಾಗಲೇ ಒಂದು ಶೆಡ್ಯೂಲ್ ಚಿತ್ರೀಕರಣ ಮುಗಿದಿದೆ. ಮೋಹನ್ ಬಿ ಕೆರೆ ಸ್ಟುಡಿಯೋದಲ್ಲಿ ಈ ಸಿನಿಮಾಗೆ ದೊಡ್ಡ ಸೆಟ್ ಹಾಕಿ ಫೈಟ್ ಸನ್ನಿವೇಶ ಸೆರೆ ಹಿಡಿಯಲಾಗಿದ್ದು. ಚಿತ್ರೀಕರಣದ ವೇಳೆ ದರ್ಶನ್ ಅವರ ಕೈಗೆ ಪೆಟ್ಟಾಗಿತ್ತು ಎನ್ನಲಾಗಿದೆ. ಕೈ ನೋವಿಗೆ ಪಟ್ಟಿ ಧರಿಸಿ ಮ್ಯಾಟ್ನಿ ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ದರ್ಶನ್ ಬಂದಿದ್ದರು. ಈಗ ಶಸ್ತ್ರ ಯಶಸ್ವಿ ಚಿಕಿತ್ಸೆ ಮಾಡಲಾಗಿದ್ದು, ಇದೀಗ ನಟ ದರ್ಶನ್ ವಿಶ್ರಾಂತಿ ಪಡೆಯುತ್ತಿದ್ದಾರೆ.

Tags:
error: Content is protected !!