Mysore
31
few clouds

Social Media

ಮಂಗಳವಾರ, 24 ಮಾರ್ಚ್ 2026
Light
Dark

ಇಂಡಿಯಾ ದೋಸ್ತಿಗಾಗಿ ರಾಜ್ಯದ ರೈತರನ್ನು ಬಲಿಕೊಟ್ಟ ಸರ್ಕಾರ: ಹಳ್ಳಿಹಕ್ಕಿ

ಮೈಸೂರು: ಐನ್‌ಡಿಐಎ ಮೈತ್ರಿಕೂಟದ ಡಿಎಂಕೆ ಪಕ್ಷದೊಂದಿಗೆ ದೊಸ್ತಿಗಾಗಿ ತಮಿಳುನಾಡಿದ ಕಾವೇರಿ ಕೊಟ್ಟು ಆಡಳತಾರೂಢ ಕಾಂಗ್ರೆಸ್‌ ಸರ್ಕಾರ ರಾಜ್ಯದ ರೈತರನ್ನು ಬಲಿಕೊಡುತ್ತಿದೆ. ಇದಕ್ಕೆ ರಾಜ್ಯದ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಎಂಎಲ್‌ಸಿ ಎಚ್‌. ವಿಶ್ವನಾಥ್‌ ಹೇಳಿದ್ದಾರೆ.

ಕಾವೇರಿಯಲ್ಲಿ ನೀರಿಲ್ಲದಿದ್ದರೂ, ತಮಿಳುನಾಡಿಗೆ ಕಾವೇರಿ ಬಿಟ್ಟುಕೊಟ್ಟು ಇಂಡಿಯಾ ಮಿತ್ರ ಬಣ ಮೆಚ್ಚಿಸಲು ಕಾಂಗ್ರೆಸ್‌ ಮುಂದಾಗಿದೆ. ಬೆಂಗಳೂರಿಗೆ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಆದರೇ ಸಿಎಂ ಸಿದ್ದರಾಮಯ್ಯ ಅವರು ಬರ ಬಂದಿದೆ ಎಂದು ಹೇಳುತ್ತಿದ್ದಾರೆ. ಹಾಗಾದರೇ ತಮಿಳುನಾಡಿಗೆ ಕಾವೇರಿ ಹರಿಸಲು ಎಲ್ಲಿಂದ ನೀರು ಬಂದು ಎಂದು ಪ್ರಶ್ನಿಸಿದ್ದಾರೆ.

ದೊಡ್ಡ ಗೌಡರು ಕಾವೇರಿಗಾಗಿ ಹಲವಾರು ಹೋರಾಟಗಳನ್ನು ನಡೆಸಿದವರು, ಆದರೆ ಸಿಎಂ ಸಿದ್ದರಾಮಯ್ಯ ಅವರು ಇವರ ಬಗ್ಗ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಇದಕ್ಕೆಲ್ಲಾ ಮತದಾರ ಪ್ರಭುಗಳು ಉತ್ತರ ನೀಡಲಿದ್ದಾರೆ ಎಂದರು.

ಇನ್ನು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ, ಜನರಿಂದ ಸಕಾರಾತ್ಮಕ ಸ್ಪಂದನೆ ಬರುತ್ತಿದ್ದು, ಮೈತ್ರಿ ಅಭ್ಯರ್ಥಿ ಪರವಾದ ಅಲೆ ನಿರ್ಮಾಣವಾಗಿದೆ. ಈ ಕ್ಷೇತ್ರದಲ್ಲಿ ಸ್ಪರ್ಧಿಸಿರುವ ರಾಜವಂಶಸ್ಥರನ್ನು ಅವಿರೋಧವಾಗಿ ಆಯ್ಕೆ ಮಾಡುವ ಉದಾರ ಮನಸ್ಥಿತಿ ಕಾಂಗ್ರೆಸ್‌ ಸರ್ಕಾರಕ್ಕೆ ಇರಬೇಕಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

Tags:
error: Content is protected !!