Mysore
26
broken clouds

Social Media

ಬುಧವಾರ, 05 ಆಗಸ್ಟ್ 2026
Light
Dark

ಕಲುಷಿತ ನೀರು ಸೇವಿಸಿ ಸಾವು ಪ್ರಕರಣ: ಡಿಎಚ್‌ಒ ಬಳಿ ಮಾಹಿತಿ ಕೇಳಿದ ಸಿಎಂ

ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ ಹಚ್ಚಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕಲುಷಿತ ನೀರು ಸೇವನೆಯಿಂದ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಆದೇಶಿಸಿದರು.

ಸಿಎಂ ಸಿದ್ದರಾಮಯ್ಯ ಅವರು ನೇರವಾಗಿ ಕರೆ ಮೂಲಕ ಮಾಹಿತಿ ಬನ್ನಲ್ಲೇ ಎಚ್ಚೆತ್ತ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ, ಜಿಲ್ಲಾಸ್ಪತ್ರೆ ಹಾಗೂ ಕೆ.ಆರ್‌ ಆಸ್ಪತ್ರೆಯಲ್ಲಿ ತಲಾ 25 ಬಡ್‌ಗಳನ್ನು ಕಾಯ್ದಿರಿಸಲಾಗಿದೆ. ವಾಂತಿ-ಬೇಧಿ ಕಾಣಿಸಿಕೊಂಡವರಲ್ಲಿ ಕಾಲರಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಡಿಎಚ್‌ಒ ತಿಳಿಸಿದ್ದಾರೆ.

Tags:
error: Content is protected !!