Mysore
24
mist

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಪೆನ್‌ಡ್ರೈವ್‌ ಪ್ರಕರಣ: ಪ್ರಜ್ವಲ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೋರ್ಟ್‌

ಹಾಸನ: ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್‌ ನೋಟಿಸ್ ಹೊರಡಿಸಲು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ಹೊಳೆ ನರಸೀಪುರ ಪೊಲೀಸ್‌ ಠಾಣೆ ಹಾಗೂ ಬೆಂಗಳೂರಿನ ಸಿಐಡಿ ದಾಖಲಿಸಿರುವ ಮೂರು ಪ್ರತ್ಯೇಕ ಪ್ರಕರಣಕ್ಕೆ ಸಂಬಂಧಿಸಿಂತೆ ಜಾಮೀನು ನೀಡುವಂತೆ ಪ್ರಜ್ವಲ್‌ ಪರ ವಕೀಲರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ತುರ್ತಾಗಿ ವಿಚಾರಣೆ ನಡೆಸುವಂತೆ ಕೋರಿದರು.

ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಾಧೀಶರಾದ ಗಜಾನನ ಭಟ್‌ ಅವರು, ಪ್ರಾಸಿಕ್ಯೂಷನ್‌ ನೋಟಿಸ್‌ ಹೊರಡಿಸಲು ಆದೇಶ ನೀಡಿದರು. ಹಾಗೂ ಈ ಪ್ರಕರಣ ವಿಶೇಷ ಪ್ರಾಸಿಕ್ಯೂಟರ್‌ಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿ ಇದೆ ಮೇ.31ಕ್ಕೆ ವಿಚಾರಣೆಯನ್ನು ಮುಂದೂಡಿ ಆದೇಶ ಹೊರಡಿಸಿದರು.

Tags: